ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯಮಂಗಲ ಕಾಡಿನ ಬಳಿ ಕಾಡಾನೆ ದಾಳಿ: ಇಬ್ಬರಿಗೆ ಗಾಯ

Published 30 ಆಗಸ್ಟ್ 2023, 13:22 IST
Last Updated 30 ಆಗಸ್ಟ್ 2023, 13:22 IST
ಅಕ್ಷರ ಗಾತ್ರ

ತಮಿಳುನಾಡು: ಸತ್ಯಮಂಗಲ ಹುಲಿ ಸಂರಕ್ಷಿತಾರಣ್ಯದ ಬಳಿ ಕಾಡಾನೆ ದಾಳಿಯಿಂದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

2 ಎಕರೆ ಜಾಗದಲ್ಲಿ ಬೆಳೆದಿದ್ದ ಬೆಳೆ ಕಾಯಲು ಮಾದೇಶ್‌ (19) ಮತ್ತು ಸಿಬು(16) ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಮಲಗಿದ್ದರು. ಬೆಳಗ್ಗಿನ ಜಾವ 3ರ ಹೊತ್ತಿಗೆ ಆನೆ ಜಮೀನಿಗೆ ಬಂದು ಬೆಳೆಗಳನ್ನು ತಿಂದಿದ್ದು, ಗುಡಿಸಿಲಿನ ಮೇಲೆಯೂ ದಾಳಿ ಮಾಡಿದೆ. ಆ ವೇಳೆ ಅಲ್ಲಿದ್ದ ಇಬ್ಬರು ಯುವಕರೂ ಗಾಯಗೊಂಡಿದ್ದಾರೆ. 

ತಕ್ಷಣ ಯುವಕರು ಸುತ್ತಮುತ್ತಲಿನ ಹಳ್ಳಿಯ ಜನರನ್ನು ಕೂಗಿ ಕರೆದು ಆನೆಯನ್ನು ಕಾಡಿಗೆ ಓಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಯುವಕರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಕರ್ನಾಟಕದ ಚಾಮರಾಜನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT