‘ಅನಾನಸ್ ಸೇವಿಸಿದಾಗ ಏಕಾಏಕಿ ಪಟಾಕಿಗಳು ಸ್ಫೋಟಗೊಂಡಿವೆ. ಇದರಿಂದ, ಆನೆ ಆಘಾತಕ್ಕೆ ಒಳಗಾಗಿದೆ. ಸ್ಫೋಟದ ತೀವ್ರತೆಗೆ ಬಾಯಿ ಮತ್ತು ನಾಲಿಗೆಗೆ ತೀವ್ರ ಗಾಯವಾಗಿದೆ. ಆನೆಯು ನೋವು ಮತ್ತು ಹಸಿವಿನಿಂದಲೇ ಗ್ರಾಮದಲ್ಲಿ ಓಡಾಡುತ್ತ ಸುತ್ತಾಡಿದೆ. ಗಾಯದಿಂದಾಗಿ ಏನನ್ನೂ ತಿನ್ನಲು ಸಾಧ್ಯವಾಗಿಲ್ಲ. ನೋವಿನಿಂದ ಬಳಲಿದರೂ ಗ್ರಾಮದ ಯಾರೊಬ್ಬರಿಗೂ ತೊಂದರೆ ನೀಡಿಲ್ಲ. ಈ ಆನೆಯೂ ದೇವಿ ಸ್ವರೂಪಿ’ ಎಂದು ಕೃಷ್ಣನ್ ಬರೆದಿದ್ದಾರೆ.