<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ಪರಿಹಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಐವರು ನೀರಿನಲ್ಲಿ ಮುಳುಗಿ ಮೃತಪಟ್ಟರೆ, ಐವರು ಸಿಡಿಲು ಬಡಿದು ಹಾಗೂ ಇನ್ನೊಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ. </p><p>ಗೋರಖ್ಪುರ, ಗೊಂಡಾ ಸೇರಿ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ವಿಪತ್ತು ಪರಿಹಾರ ಇಲಾಖೆ ಸ್ಥಳೀಯ ಆಡಳಿತವನ್ನು ಎಚ್ಚರಿಸಿದೆ.</p><p>ಪ್ರತಿಕೂಲ ಹವಾಮಾನದಿಂದ ಉಂಟಾಗುವ ಅಪಾಯವನ್ನು ತಪ್ಪಿಸಲು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಜ್ಯದ 75 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಹಮೀರ್ಪುರದಲ್ಲಿ ಗರಿಷ್ಠ 163.2 ಮಿಲಿ ಮೀಟರ್ ಮಳೆಯಾಗಿದೆ. ಸರಾಸರಿ ರಾಜ್ಯದಲ್ಲಿ ಒಂದು ದಿನ ಅವಧಿಯಲ್ಲಿ 7.3 ಮಿಲಿ ಮೀಟರ್ ಮಳೆಯಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ಪರಿಹಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಐವರು ನೀರಿನಲ್ಲಿ ಮುಳುಗಿ ಮೃತಪಟ್ಟರೆ, ಐವರು ಸಿಡಿಲು ಬಡಿದು ಹಾಗೂ ಇನ್ನೊಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ. </p><p>ಗೋರಖ್ಪುರ, ಗೊಂಡಾ ಸೇರಿ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ವಿಪತ್ತು ಪರಿಹಾರ ಇಲಾಖೆ ಸ್ಥಳೀಯ ಆಡಳಿತವನ್ನು ಎಚ್ಚರಿಸಿದೆ.</p><p>ಪ್ರತಿಕೂಲ ಹವಾಮಾನದಿಂದ ಉಂಟಾಗುವ ಅಪಾಯವನ್ನು ತಪ್ಪಿಸಲು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಜ್ಯದ 75 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಹಮೀರ್ಪುರದಲ್ಲಿ ಗರಿಷ್ಠ 163.2 ಮಿಲಿ ಮೀಟರ್ ಮಳೆಯಾಗಿದೆ. ಸರಾಸರಿ ರಾಜ್ಯದಲ್ಲಿ ಒಂದು ದಿನ ಅವಧಿಯಲ್ಲಿ 7.3 ಮಿಲಿ ಮೀಟರ್ ಮಳೆಯಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>