<p><strong>ನವದೆಹಲಿ:</strong> ಎಲ್ಗಾರ್ ಪರಿಷತ್– ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಮಹೇಶ್ ರಾವುತ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p><p>ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ರಾವುತ್ ಅವರ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ವಿಚಾರಣೆ ನಡೆಸಿತು.</p><p>ರಾವುತ್ ಅವರು ರೂಮಾಟಾಯ್ಡ್ ಸಂಧಿವಾತದಿಂದ ಬಳಲುತ್ತಿದ್ದಾರೆ ಎಂದು ಅವರ ಪರ ಹಿರಿಯ ವಕೀಲ ಸಿ.ಯು.ಸಿಂಗ್ ವಾದ ಮಂಡಿಸಿದರು.</p><p>‘ವೈದ್ಯಕೀಯ ಕಾರಣಗಳನ್ನು ಆಧರಿಸಿ ರಾವುತ್ ಅವರಿಗೆ ಬಾಂಬೆ ಹೈಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ. ನಾವು ಕೂಡಾ ರಾವುತ್ ಅವರಿಗೆ ಆರು ವಾರಗಳ ಕಾಲ ಜಾಮೀನು ನೀಡಲು ಇಚ್ಛಿಸಿದ್ದೇವೆ’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.</p><p>ರಾವುತ್ ಅವರಿಗೆ ಜಾಮೀನು ಮಂಜೂರು ಮಾಡಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮನವಿ ಮೇರೆಗೆ ತನ್ನದೇ ಆದ ಆದೇಶವನ್ನು ಒಂದು ವಾರ ತಡೆಹಿಡಿದಿತ್ತು.</p><p>2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷತ್ ಸಮ್ಮೇಳನದಲ್ಲಿ ರಾವುತ್ ಸೇರಿ ಅನೇಕರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದರ ಪರಿಣಾಮ ಮಾರನೇ ದಿನ ನಗರ ಹೊರವಲಯದ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆದಿತ್ತು.</p><p>ರಾವುತ್ ಅವರನ್ನು 2018ರ ಜೂನ್ 6ರಂದು ಬಂಧಿಸಿ ನವಿ ಮುಂಬೈನ ತಾಲೋಜ ಜೈಲಿನಲ್ಲಿ ಇರಿಸಲಾಗಿತ್ತು. ಪ್ರಕರಣ ಸಂಬಂಧ ರಾವುತ್ ಸೇರಿದಂತೆ 16 ಜನರನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಲ್ಗಾರ್ ಪರಿಷತ್– ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಮಹೇಶ್ ರಾವುತ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p><p>ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ರಾವುತ್ ಅವರ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ವಿಚಾರಣೆ ನಡೆಸಿತು.</p><p>ರಾವುತ್ ಅವರು ರೂಮಾಟಾಯ್ಡ್ ಸಂಧಿವಾತದಿಂದ ಬಳಲುತ್ತಿದ್ದಾರೆ ಎಂದು ಅವರ ಪರ ಹಿರಿಯ ವಕೀಲ ಸಿ.ಯು.ಸಿಂಗ್ ವಾದ ಮಂಡಿಸಿದರು.</p><p>‘ವೈದ್ಯಕೀಯ ಕಾರಣಗಳನ್ನು ಆಧರಿಸಿ ರಾವುತ್ ಅವರಿಗೆ ಬಾಂಬೆ ಹೈಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ. ನಾವು ಕೂಡಾ ರಾವುತ್ ಅವರಿಗೆ ಆರು ವಾರಗಳ ಕಾಲ ಜಾಮೀನು ನೀಡಲು ಇಚ್ಛಿಸಿದ್ದೇವೆ’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.</p><p>ರಾವುತ್ ಅವರಿಗೆ ಜಾಮೀನು ಮಂಜೂರು ಮಾಡಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮನವಿ ಮೇರೆಗೆ ತನ್ನದೇ ಆದ ಆದೇಶವನ್ನು ಒಂದು ವಾರ ತಡೆಹಿಡಿದಿತ್ತು.</p><p>2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷತ್ ಸಮ್ಮೇಳನದಲ್ಲಿ ರಾವುತ್ ಸೇರಿ ಅನೇಕರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದರ ಪರಿಣಾಮ ಮಾರನೇ ದಿನ ನಗರ ಹೊರವಲಯದ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆದಿತ್ತು.</p><p>ರಾವುತ್ ಅವರನ್ನು 2018ರ ಜೂನ್ 6ರಂದು ಬಂಧಿಸಿ ನವಿ ಮುಂಬೈನ ತಾಲೋಜ ಜೈಲಿನಲ್ಲಿ ಇರಿಸಲಾಗಿತ್ತು. ಪ್ರಕರಣ ಸಂಬಂಧ ರಾವುತ್ ಸೇರಿದಂತೆ 16 ಜನರನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>