‘ಪಠ್ಯಪುಸ್ತಕಗಳನ್ನು ತರ್ಕಬದ್ಧಗೊಳಿಸುವ ಸಲುವಾಗಿ ಮಾಡಲಾಗಿರುವ ಬದಲಾವಣೆಗಳನ್ನು ಸಮರ್ಥಿಸಿಕೊಳ್ಳಲಾಗಿದೆ. ಆದರೆ, ಈ ಕಾರ್ಯದ ಹಿಂದೆ ಶಿಕ್ಷಣಕ್ಕೆ ಸಂಬಂಧಿಸಿ ಯಾವುದೇ ತರ್ಕ ಕಾಣುತ್ತಿಲ್ಲ. ಗುರುತಿಸಲು ಸಾಧ್ಯವಿಲ್ಲ ಎಂಬಷ್ಟರ ಮಟ್ಟಿಗೆ ಪಠ್ಯವನ್ನು ವಿರೂಪಗೊಳಿಸಲಾಗಿದೆ’ ಎಂದು ಅವರು ಎನ್ಸಿಇಆರ್ಟಿ ನಿರ್ದೇಶಕ ದಿನೇಶ ಸಕ್ಲಾನಿ ಅವರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.