<p><strong>ನವದೆಹಲಿ:</strong> 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.</p><p>'ಅಂದಿನ ಸರ್ಕಾರವು ಜನರ ಮೇಲೆ ಹೇರಿದ ದೌರ್ಜನ್ಯವನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರನ್ನು ಯಾವಾಗಲೂ ಸ್ಮರಿಸಲಾಗುವುದು. ಇದರಿಂದ ಸಂವಿಧಾನವನ್ನು ಬಲಿಷ್ಠವಾಗಿಡಲು ಹಾಗೂ ಜನರು ಎಚ್ಚರವಾಗಿರಲು ಪ್ರೇರೇಪಿಸಲಿದೆ' ಎಂದು ಹೇಳಿದ್ದಾರೆ. </p><p>'ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನದ ಹತ್ಯೆ ಮಾಡಿದ್ದಲ್ಲದೆ ನ್ಯಾಯಾಂಗವನ್ನು ಕೈಗೊಂಬೆಯಾಗಿ ಮಾಡಿಕೊಂಡಿದ್ದರು' ಎಂದು ಮೋದಿ ಆರೋಪಿಸಿದ್ದಾರೆ. </p><p>ತುರ್ತು ಪರಿಸ್ಥಿತಿಯಲ್ಲಿ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಅಥವಾ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೆಸರುಗಳನ್ನು ಉಲ್ಲೇಖಿಸಿದಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. </p><p>'1975ರಿಂದ 1977ರ ವರೆಗಿನ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜನರಿಗೆ ತೊಂದರೆ ಕೊಡಲಾಯಿತು. ಇದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಿರಂತರ ಹೋರಾಟದ ಬಳಿಕ ಅಂತಿಮ ಗೆಲುವು ಜನರದ್ದಾಯಿತು. ಅಂತಿಮವಾಗಿ ತುರ್ತು ಪರಿಸ್ಥಿತಿಯನ್ನು ತೆಗೆದುಹಾಕಲಾಯಿತು' ಎಂದು ಹೇಳಿದ್ದಾರೆ. </p><p>ಪ್ರಧಾನಿ ತಮ್ಮ ಭಾಷಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಹೇಳಿಕೆಯ ಆಡಿಯೊವನ್ನು ಪ್ರಸಾರ ಮಾಡಿದ್ದಾರೆ. </p>.Mann Ki Baat: ಪ್ರಧಾನಿ ಮೋದಿ ಮನ ಗೆದ್ದ ಕಲಬುರಗಿ ರೊಟ್ಟಿ.Mann Ki Baat | ಪ್ರತಿ ವರ್ಷ ಯೋಗ ದಿನ ಹೆಚ್ಚು ಭವ್ಯವಾಗುತ್ತಿದೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಮನ್ ಕಿ ಬಾತ್' ರೆಡಿಯೊ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.</p><p>'ಅಂದಿನ ಸರ್ಕಾರವು ಜನರ ಮೇಲೆ ಹೇರಿದ ದೌರ್ಜನ್ಯವನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದವರನ್ನು ಯಾವಾಗಲೂ ಸ್ಮರಿಸಲಾಗುವುದು. ಇದರಿಂದ ಸಂವಿಧಾನವನ್ನು ಬಲಿಷ್ಠವಾಗಿಡಲು ಹಾಗೂ ಜನರು ಎಚ್ಚರವಾಗಿರಲು ಪ್ರೇರೇಪಿಸಲಿದೆ' ಎಂದು ಹೇಳಿದ್ದಾರೆ. </p><p>'ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನದ ಹತ್ಯೆ ಮಾಡಿದ್ದಲ್ಲದೆ ನ್ಯಾಯಾಂಗವನ್ನು ಕೈಗೊಂಬೆಯಾಗಿ ಮಾಡಿಕೊಂಡಿದ್ದರು' ಎಂದು ಮೋದಿ ಆರೋಪಿಸಿದ್ದಾರೆ. </p><p>ತುರ್ತು ಪರಿಸ್ಥಿತಿಯಲ್ಲಿ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ ಅಥವಾ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೆಸರುಗಳನ್ನು ಉಲ್ಲೇಖಿಸಿದಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. </p><p>'1975ರಿಂದ 1977ರ ವರೆಗಿನ 21 ತಿಂಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜನರಿಗೆ ತೊಂದರೆ ಕೊಡಲಾಯಿತು. ಇದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಿರಂತರ ಹೋರಾಟದ ಬಳಿಕ ಅಂತಿಮ ಗೆಲುವು ಜನರದ್ದಾಯಿತು. ಅಂತಿಮವಾಗಿ ತುರ್ತು ಪರಿಸ್ಥಿತಿಯನ್ನು ತೆಗೆದುಹಾಕಲಾಯಿತು' ಎಂದು ಹೇಳಿದ್ದಾರೆ. </p><p>ಪ್ರಧಾನಿ ತಮ್ಮ ಭಾಷಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಹೇಳಿಕೆಯ ಆಡಿಯೊವನ್ನು ಪ್ರಸಾರ ಮಾಡಿದ್ದಾರೆ. </p>.Mann Ki Baat: ಪ್ರಧಾನಿ ಮೋದಿ ಮನ ಗೆದ್ದ ಕಲಬುರಗಿ ರೊಟ್ಟಿ.Mann Ki Baat | ಪ್ರತಿ ವರ್ಷ ಯೋಗ ದಿನ ಹೆಚ್ಚು ಭವ್ಯವಾಗುತ್ತಿದೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>