<p class="title"><strong>ನವದೆಹಲಿ:</strong> ಒಳಚರಂಡಿ, ಶೌಚಗುಂಡಿ ಶುಚಿಗೊಳಿಸುವ ಕೆಲಸಗಳಲ್ಲಿ ಸಂಭವಿಸುವ ಅವಘಡಗಳನ್ನು ತಪ್ಪಿಸಲು ಅಗ್ನಿಶಾಮಕ ಸೇವೆಯ ರೀತಿಯಲ್ಲಿ ‘ತುರ್ತು ಸ್ಪಂದನೆ ನೈರ್ಮಲ್ಯ ಘಟಕ’ಗಳನ್ನು (ಇಆರ್ಎಸ್ಯು) ರಚಿಸುವಂತೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.</p>.<p class="title">ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.</p>.<p class="title">ನೈರ್ಮಲ್ಯಕ್ಕೆ ಸಂಬಂಧಿಸಿದ ಯಾವುದೇ ತುರ್ತು ಕರೆಗಳಿಗೆ ಸ್ಪಂದಿಸುವುದು ಈ ಘಟಕದ ಹೊಣೆಗಾರಿಕೆಯಾಗಿರುತ್ತದೆ. 75 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅವಘಡ ಸಂಭವಿಸಿದರೂ, ಅದನ್ನು ನಿಭಾಯಿಸುವ ಜವಾಬ್ದಾರಿ ನೀಡಲಾಗಿದೆ.</p>.<p class="title">ಶೌಚಗುಂಡಿ, ಒಳಚರಂಡಿ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ಕೆಲಸಗಳಲ್ಲಿ ಸಂಭವಿಸುವ ಅನಾಹುತ ಕುರಿತ ವರದಿಗಳನ್ನು ಕೇಂದ್ರ ಸರ್ಕಾರಗಂಭೀರವಾಗಿ ಪರಿಗಣಿಸಿ, ಈ ಸೂಚನೆ ನೀಡಿದೆ.</p>.<p class="title">ಗುಂಡಿ ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿರುವ ಕಾರ್ಮಿಕರಿಗೆ ನಿಗದಿತ ತರಬೇತಿ, ಅಗತ್ಯ ಸಲಕರಣೆ ಹಾಗೂ ಚರಂಡಿ ಶುಚಿಗೊಳಿಸುವ ವೃತ್ತಿಪರರು ಎಂಬ ಪ್ರಮಾಣಪತ್ರ ಕಡ್ಡಾಯ ಎಂಬುದನ್ನು ಕಾರ್ಯದರ್ಶಿ ಒತ್ತಿ ಹೇಳಿದ್ದಾರೆ.</p>.<p class="title">ತರಬೇತಿ ಪಡೆದ ಕೆಲಸಗಾರನ್ನು ಬಿಟ್ಟು ಬೇರೆ ವ್ಯಕ್ತಿಗಳು ಚರಂಡಿ ಸ್ವಚ್ಚಗೊಳಿಸುವ ಕೆಲಸ ಮಾಡುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ.ಸ್ಥಳೀಯ ನಗರಾಡಳಿತಗಳಿಗೆ ರಾಜ್ಯ ಸರ್ಕಾರಗಳು ಈ ಸಂಬಂಧ ಕಟ್ಟುನಿಟ್ಟಿನ ಸೂಚನೆ ರವಾನಿಸಬೇಕು ಎಂದು ಕೇಂದ್ರ ಸೂಚಿಸಿದೆ.</p>.<p class="title">***</p>.<p class="title">ರಾಜಧಾನಿ ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಎಲ್ಲ ನಗರಗಳಲ್ಲಿ ತುರ್ತು ನಿರ್ವಹಣಾ ಘಟಕ ಸ್ಥಾಪಿಸುವುದು ಕಡ್ಡಾಯ</p>.<p class="title">–<strong>ದುರ್ಗಾಶಂಕರ್ ಮಿಶ್ರಾ,ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಒಳಚರಂಡಿ, ಶೌಚಗುಂಡಿ ಶುಚಿಗೊಳಿಸುವ ಕೆಲಸಗಳಲ್ಲಿ ಸಂಭವಿಸುವ ಅವಘಡಗಳನ್ನು ತಪ್ಪಿಸಲು ಅಗ್ನಿಶಾಮಕ ಸೇವೆಯ ರೀತಿಯಲ್ಲಿ ‘ತುರ್ತು ಸ್ಪಂದನೆ ನೈರ್ಮಲ್ಯ ಘಟಕ’ಗಳನ್ನು (ಇಆರ್ಎಸ್ಯು) ರಚಿಸುವಂತೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.</p>.<p class="title">ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.</p>.<p class="title">ನೈರ್ಮಲ್ಯಕ್ಕೆ ಸಂಬಂಧಿಸಿದ ಯಾವುದೇ ತುರ್ತು ಕರೆಗಳಿಗೆ ಸ್ಪಂದಿಸುವುದು ಈ ಘಟಕದ ಹೊಣೆಗಾರಿಕೆಯಾಗಿರುತ್ತದೆ. 75 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅವಘಡ ಸಂಭವಿಸಿದರೂ, ಅದನ್ನು ನಿಭಾಯಿಸುವ ಜವಾಬ್ದಾರಿ ನೀಡಲಾಗಿದೆ.</p>.<p class="title">ಶೌಚಗುಂಡಿ, ಒಳಚರಂಡಿ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ಕೆಲಸಗಳಲ್ಲಿ ಸಂಭವಿಸುವ ಅನಾಹುತ ಕುರಿತ ವರದಿಗಳನ್ನು ಕೇಂದ್ರ ಸರ್ಕಾರಗಂಭೀರವಾಗಿ ಪರಿಗಣಿಸಿ, ಈ ಸೂಚನೆ ನೀಡಿದೆ.</p>.<p class="title">ಗುಂಡಿ ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿರುವ ಕಾರ್ಮಿಕರಿಗೆ ನಿಗದಿತ ತರಬೇತಿ, ಅಗತ್ಯ ಸಲಕರಣೆ ಹಾಗೂ ಚರಂಡಿ ಶುಚಿಗೊಳಿಸುವ ವೃತ್ತಿಪರರು ಎಂಬ ಪ್ರಮಾಣಪತ್ರ ಕಡ್ಡಾಯ ಎಂಬುದನ್ನು ಕಾರ್ಯದರ್ಶಿ ಒತ್ತಿ ಹೇಳಿದ್ದಾರೆ.</p>.<p class="title">ತರಬೇತಿ ಪಡೆದ ಕೆಲಸಗಾರನ್ನು ಬಿಟ್ಟು ಬೇರೆ ವ್ಯಕ್ತಿಗಳು ಚರಂಡಿ ಸ್ವಚ್ಚಗೊಳಿಸುವ ಕೆಲಸ ಮಾಡುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ.ಸ್ಥಳೀಯ ನಗರಾಡಳಿತಗಳಿಗೆ ರಾಜ್ಯ ಸರ್ಕಾರಗಳು ಈ ಸಂಬಂಧ ಕಟ್ಟುನಿಟ್ಟಿನ ಸೂಚನೆ ರವಾನಿಸಬೇಕು ಎಂದು ಕೇಂದ್ರ ಸೂಚಿಸಿದೆ.</p>.<p class="title">***</p>.<p class="title">ರಾಜಧಾನಿ ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಎಲ್ಲ ನಗರಗಳಲ್ಲಿ ತುರ್ತು ನಿರ್ವಹಣಾ ಘಟಕ ಸ್ಥಾಪಿಸುವುದು ಕಡ್ಡಾಯ</p>.<p class="title">–<strong>ದುರ್ಗಾಶಂಕರ್ ಮಿಶ್ರಾ,ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>