<p><strong>ಮಿರ್ಜಾಪುರ</strong>: ದೂರದ ಅಯೋಧ್ಯೆಯಿಂದ ತಮಗಾಗಿ ಬಂದ ಅಕ್ಷತೆ, ಆಮಂತ್ರಣ ಪತ್ರ ಕಂಡು 70 ವರ್ಷದ ಮುಸ್ಲಿಂ ಕರಸೇವಕ ಮೊಹಮ್ಮದ್ ಹಬೀಬ್ ಭಾವುಕರಾಗಿದ್ದಾರೆ.</p><p>ಹೌದು.... ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದ ಹಬೀಬ್ ಕರಸೇವಕರಾಗಿ ಗುರುತಿಸಿಕೊಂಡಿದ್ದರು. ಡಿಸೆಂಬರ್ 2, 1992ರಲ್ಲಿ ಅಯೋಧ್ಯೆ ತಲುಪಿದ್ದ ಅವರು ಇತರ ಕರಸೇವಕರ ಜೊತೆಗೆ ನಾಲ್ಕೈದು ದಿನಗಳ ಕಾಲ ಅಯೋಧ್ಯೆಯಲ್ಲಿ ತಂಗಿರುವುದಾಗಿ ತಿಳಿಸಿದ್ದಾರೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದು, ದೇಶದೆಲ್ಲೆಡೆ ಕೋಲಾಹಲವನ್ನೇ ಸೃಷ್ಟಿಸಿತ್ತು.</p><p>‘ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ದಿನಕ್ಕಾಗಿ ನಾವು ತಪಸ್ಸು ಮಾಡಿದ್ದೆವು. ಸಾವಿರಾರು ಜನರ ಕನಸು ನನಸು ಮಾಡಲು ಯುದ್ಧವನ್ನೇ ಮಾಡಿದ್ದೇವು’ ಎಂದು ತಮ್ಮ ಹೋರಾಟದ ದಿನಗಳನ್ನು ಹಬೀಬ್ ನೆನಪಿಸಿಕೊಂಡಿದ್ದಾರೆ.</p><p>‘ಶ್ರೀರಾಮ ನನ್ನ ಪೂರ್ವಜ ಎಂದು ನಾನು ನಂಬಿದ್ದೇನೆ. ಪೂರ್ವಜರನ್ನು ನೆನಪಿಸಿಕೊಳ್ಳುವುದೇ ನಿಜವಾದ ಭಾರತೀಯತೆಯಲ್ಲವೇ’ ಎಂದು ಅವರು ಹೇಳಿದ್ದಾರೆ.</p><p>‘ಮಿರ್ಜಾಪುರ ಬಿಜೆಪಿ ಘಟಕದಲ್ಲಿ ಹಲವು ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಸುಮಾರು 32 ವರ್ಷಗಳ ನಂತರ ನಮ್ಮ ಹೋರಾಟಕ್ಕೆ ಗೆಲುವು ದಕ್ಕಿದೆ. ಹಳೆಯ ನೆನಪುಗಳೆಲ್ಲ ಮರುಕಳಿಸುತ್ತಿದೆ. 1992ರಲ್ಲಿ ಅಯೋಧ್ಯೆಯಲ್ಲಿ ನಾಲ್ಕೈದು ದಿನ ತಂಗಿದ್ದೆವು’ ಎಂದರು.</p><p>‘ಭದ್ರತಾ ದೃಷ್ಟಿಯಿಂದ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಅಯೋಧ್ಯೆಗೆ ಬರಬೇಡಿ ಎಂದು ಪ್ರಧಾನಿ ಮೋದಿ ಅವರು ಜನರಿಗೆ ಮನವಿ ಮಾಡಿದ್ದಾರೆ. ಆದ್ದರಿಂದ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಟಿವಿಯಲ್ಲಿ ನೋಡುತ್ತೇನೆ. ನಂತರ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತೇನೆ’ ಎಂದು ತಿಳಿಸಿದರು.</p><p>ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ದೇಶ, ವಿದೇಶ ಸೇರಿದಂತೆ ಸುಮಾರು 6 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗಿದೆ.</p><p>ರಾಮಜನ್ಮಭೂಮಿ–ಬಾಬ್ರಿ ಮಸೀದಿ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿ ಅವರಿಗೂ ಆಹ್ವಾನ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಿರ್ಜಾಪುರ</strong>: ದೂರದ ಅಯೋಧ್ಯೆಯಿಂದ ತಮಗಾಗಿ ಬಂದ ಅಕ್ಷತೆ, ಆಮಂತ್ರಣ ಪತ್ರ ಕಂಡು 70 ವರ್ಷದ ಮುಸ್ಲಿಂ ಕರಸೇವಕ ಮೊಹಮ್ಮದ್ ಹಬೀಬ್ ಭಾವುಕರಾಗಿದ್ದಾರೆ.</p><p>ಹೌದು.... ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದ ಹಬೀಬ್ ಕರಸೇವಕರಾಗಿ ಗುರುತಿಸಿಕೊಂಡಿದ್ದರು. ಡಿಸೆಂಬರ್ 2, 1992ರಲ್ಲಿ ಅಯೋಧ್ಯೆ ತಲುಪಿದ್ದ ಅವರು ಇತರ ಕರಸೇವಕರ ಜೊತೆಗೆ ನಾಲ್ಕೈದು ದಿನಗಳ ಕಾಲ ಅಯೋಧ್ಯೆಯಲ್ಲಿ ತಂಗಿರುವುದಾಗಿ ತಿಳಿಸಿದ್ದಾರೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದು, ದೇಶದೆಲ್ಲೆಡೆ ಕೋಲಾಹಲವನ್ನೇ ಸೃಷ್ಟಿಸಿತ್ತು.</p><p>‘ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ದಿನಕ್ಕಾಗಿ ನಾವು ತಪಸ್ಸು ಮಾಡಿದ್ದೆವು. ಸಾವಿರಾರು ಜನರ ಕನಸು ನನಸು ಮಾಡಲು ಯುದ್ಧವನ್ನೇ ಮಾಡಿದ್ದೇವು’ ಎಂದು ತಮ್ಮ ಹೋರಾಟದ ದಿನಗಳನ್ನು ಹಬೀಬ್ ನೆನಪಿಸಿಕೊಂಡಿದ್ದಾರೆ.</p><p>‘ಶ್ರೀರಾಮ ನನ್ನ ಪೂರ್ವಜ ಎಂದು ನಾನು ನಂಬಿದ್ದೇನೆ. ಪೂರ್ವಜರನ್ನು ನೆನಪಿಸಿಕೊಳ್ಳುವುದೇ ನಿಜವಾದ ಭಾರತೀಯತೆಯಲ್ಲವೇ’ ಎಂದು ಅವರು ಹೇಳಿದ್ದಾರೆ.</p><p>‘ಮಿರ್ಜಾಪುರ ಬಿಜೆಪಿ ಘಟಕದಲ್ಲಿ ಹಲವು ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಸುಮಾರು 32 ವರ್ಷಗಳ ನಂತರ ನಮ್ಮ ಹೋರಾಟಕ್ಕೆ ಗೆಲುವು ದಕ್ಕಿದೆ. ಹಳೆಯ ನೆನಪುಗಳೆಲ್ಲ ಮರುಕಳಿಸುತ್ತಿದೆ. 1992ರಲ್ಲಿ ಅಯೋಧ್ಯೆಯಲ್ಲಿ ನಾಲ್ಕೈದು ದಿನ ತಂಗಿದ್ದೆವು’ ಎಂದರು.</p><p>‘ಭದ್ರತಾ ದೃಷ್ಟಿಯಿಂದ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಅಯೋಧ್ಯೆಗೆ ಬರಬೇಡಿ ಎಂದು ಪ್ರಧಾನಿ ಮೋದಿ ಅವರು ಜನರಿಗೆ ಮನವಿ ಮಾಡಿದ್ದಾರೆ. ಆದ್ದರಿಂದ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಟಿವಿಯಲ್ಲಿ ನೋಡುತ್ತೇನೆ. ನಂತರ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತೇನೆ’ ಎಂದು ತಿಳಿಸಿದರು.</p><p>ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ದೇಶ, ವಿದೇಶ ಸೇರಿದಂತೆ ಸುಮಾರು 6 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗಿದೆ.</p><p>ರಾಮಜನ್ಮಭೂಮಿ–ಬಾಬ್ರಿ ಮಸೀದಿ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿ ಅವರಿಗೂ ಆಹ್ವಾನ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>