ಭಾರತ ಸರ್ಕಾರವು ನಾಗರಿಕ ಸೇವೆಗಳ ಸಾಮರ್ಥ್ಯ ನಿರ್ಮಾಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್ಪಿಸಿಎಸ್ಸಿಬಿ) ಅಥವಾ ಮಿಷನ್ ಕರ್ಮಯೋಗಿ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಸಾರ್ವಜನಿಕರ ಬದಲಾಗುತ್ತಿರುವ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾಗರಿಕ ಸೇವೆಗಳ ಸಾಮರ್ಥ್ಯವನ್ನು ಬೆಳೆಸಲು ಈ ಯೊಜನೆ ಇದೆ.