<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.</p>.<p>ಬುದ್ಗಾಮ್ನ ವಾಟರ್ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದವು.</p>.<p>ಬಂಧಿತ ಉಗ್ರ ಲತೀಫ್ ರಾಥರ್, ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮತ್ತು ಅಮ್ರೀನ್ ಭಟ್ ಸೇರಿದಂತೆ ಹಲವಾರು ನಾಗರಿಕರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.</p>.<p>ಕಳೆದ ಮೇ ತಿಂಗಳಲ್ಲಿ ಬುದ್ಗಾಮ್ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಖಂಡಿಸಿ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.</p>.<p>ಕಾಶ್ಮೀರದ ಕಿರುತೆರೆ ನಟಿ ಅಮ್ರೀನ್ ಭಟ್ ಅವರನ್ನು ಮೇ 26ರಂದು ಬುದ್ಗಾಮ್ನ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದರು.</p>.<p>ಸದ್ಯ ಬಂಧಿಸಿರುವ ಉಗ್ರರ ಬಳಿ 5 ಪಿಸ್ತೂಲ್ಗಳು, 5 ಮ್ಯಾಗಜಿನ್ಗಳು, 50 ಗುಂಡುಗಳು ಸೇರಿದಂತೆ ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.</p>.<p><strong>ಓದಿ...<a href="https://www.prajavani.net/india-news/42-year-old-mother-and-her-24-years-old-son-from-kerala-have-cleared-psc-exam-together-962009.html" target="_blank">ಕೇರಳ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ತಾಯಿ– ಮಗ</a></strong></p>.<p><strong>ಓದಿ...<a href="https://www.prajavani.net/sports/cricket/rudi-koertzen-dies-virender-sehwag-sachin-tendulkar-says-had-a-great-relation-with-him-962007.html" target="_blank">ಕ್ರಿಕೆಟ್ ಅಂಪೈರ್ ರೂಡಿ ಕರ್ಜನ್ ನಿಧನ: ಕಂಬನಿ ಮಿಡಿದ ಸಚಿನ್, ಸೆಹ್ವಾಗ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಷ್ಕರ್–ಎ–ತಯಬಾ (ಎಲ್ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.</p>.<p>ಬುದ್ಗಾಮ್ನ ವಾಟರ್ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದವು.</p>.<p>ಬಂಧಿತ ಉಗ್ರ ಲತೀಫ್ ರಾಥರ್, ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮತ್ತು ಅಮ್ರೀನ್ ಭಟ್ ಸೇರಿದಂತೆ ಹಲವಾರು ನಾಗರಿಕರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.</p>.<p>ಕಳೆದ ಮೇ ತಿಂಗಳಲ್ಲಿ ಬುದ್ಗಾಮ್ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಖಂಡಿಸಿ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.</p>.<p>ಕಾಶ್ಮೀರದ ಕಿರುತೆರೆ ನಟಿ ಅಮ್ರೀನ್ ಭಟ್ ಅವರನ್ನು ಮೇ 26ರಂದು ಬುದ್ಗಾಮ್ನ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದರು.</p>.<p>ಸದ್ಯ ಬಂಧಿಸಿರುವ ಉಗ್ರರ ಬಳಿ 5 ಪಿಸ್ತೂಲ್ಗಳು, 5 ಮ್ಯಾಗಜಿನ್ಗಳು, 50 ಗುಂಡುಗಳು ಸೇರಿದಂತೆ ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.</p>.<p><strong>ಓದಿ...<a href="https://www.prajavani.net/india-news/42-year-old-mother-and-her-24-years-old-son-from-kerala-have-cleared-psc-exam-together-962009.html" target="_blank">ಕೇರಳ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ತಾಯಿ– ಮಗ</a></strong></p>.<p><strong>ಓದಿ...<a href="https://www.prajavani.net/sports/cricket/rudi-koertzen-dies-virender-sehwag-sachin-tendulkar-says-had-a-great-relation-with-him-962007.html" target="_blank">ಕ್ರಿಕೆಟ್ ಅಂಪೈರ್ ರೂಡಿ ಕರ್ಜನ್ ನಿಧನ: ಕಂಬನಿ ಮಿಡಿದ ಸಚಿನ್, ಸೆಹ್ವಾಗ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>