ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ರಕ್ಷಣಾ ಪಡೆಗಳುಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿವೆ. ಉಗ್ರರತ್ತ ಹಾರಿಸಿದ ಗುಂಡು ತಗುಲಿಓರ್ವ ಮಹಿಳೆಗೆ ಗಾಯವಾಗಿದೆ.
ಇಲ್ಲಿನ ಶ್ರೀಗುಫ್ವಾರ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ರಕ್ಷಣಾ ಪಡೆ ದಾಳಿ ನಡೆಸಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಗ್ರರು ಅವಿತಿರುವ ಸುದ್ದಿ ತಿಳಿದ ಕ್ಷಣದಿಂದ ಈ ಜಿಲ್ಲೆಯಲ್ಲಿ ಅಂತರ್ಜಾಲ ಸಂಪರ್ಕ ಸ್ಥಗಿತಗೊಳಿಸಲಾಗಿದೆ.
ಭದ್ರತಾ ಸಿಬ್ಬಂದಿ ಮತ್ತು ಉಗ್ರರ ನಡುವೆಗುಂಡಿನ ಚಕಮಕಿ ಮುಂದುವರಿದಿದೆ. ಇಬ್ಬರು ಉಗ್ರರು ರಕ್ಷಣಾ ಪಡೆಯ ಬಲೆಗೆ ಬಿದ್ದಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.