<p><strong>ಅಹಮದಾಬಾದ್:</strong> ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಯ (ಇ.ಡಿ) ಬಂಧಿಸಿದ್ದ, ‘ಗುಜರಾತ್ ಸಮಾಚಾರ್’ ದಿನಪತ್ರಿಕೆಯ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರಿಗೆ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.</p><p>ಬಂಧನಕ್ಕೆ ಒಳಗಾದ ನಂತರ, ಅವರು ಅಸ್ವಸ್ಥರಾದರು. ಹೀಗಾಗಿ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದೆ.</p><p>ಶಾ ಪರ ವಾದ ಮಂಡಿಸಿದ ವಕೀಲ ದೇವಾಂಗ ವ್ಯಾಸ್,‘ನನ್ನ ಕಕ್ಷಿದಾರ ತನಿಖೆಗೆ ಸಹಕರಿಸುತ್ತಿದ್ದಾರೆ. ತುಸು ಅಸ್ವಸ್ಥರಾಗಿರುವ ಕಾರಣ ವೈದ್ಯಕೀಯ ಕಾರಣಗಳಿಗಾಗಿ ಅವರು ಜಾಮೀನು ಕೋರಿದ್ದಾರೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p><p>ಇ.ಡಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸದ ಕಾರಣ, ವೈದ್ಯಕೀಯ ಕಾರಣಗಳಿಂದಾಗಿ ಅವರಿಗೆ ಮೇ 31ರ ವರೆಗೆ ಜಾಮೀನು ನೀಡಿ, ಪಿಎಂಎಲ್ಎ ವಿಶೇಷ ನ್ಯಾಯಾಲಯ ಆದೇಶಿಸಿದೆ.</p><p>‘ಶಾ ಬಂಧನಕ್ಕೆ ಕಾರಣ ಗೊತ್ತಾಗಿಲ್ಲ. 30 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸಿರಬಹುದು’ ಎಂದು ಅವರ ಅಣ್ಣ ಶ್ರೇಯಾಂಶ್ ಶಾ ‘ಪ್ರಜಾವಾಣಿ‘ಗೆ ತಿಳಿಸಿದ್ದಾರೆ.</p><p>ಶಾ ಅವರು ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾತೃಸಂಸ್ಥೆ ಲೋಕ್ ಪ್ರಕಾಶನ ಲಿಮಿಟೆಡ್ ನಿರ್ದೇಶಕರಾಗಿದ್ದಾರೆ. ಶೇಯಾಂಶ್ ಶಾ ಅವರು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದಾರೆ.</p><p>ಶಾ ಅವರನ್ನು ಇ.ಡಿ ಗುರುವಾರ ತಡರಾತ್ರಿ ವಶಕ್ಕೆ ಪಡೆದಿತ್ತು. ಇದಕ್ಕೂ ಮುನ್ನ ಇ.ಡಿ ಅಧಿಕಾರಿಗಳು ಅವರ ಕಚೇರಿಗಳಲ್ಲಿ ಶೋಧ ನಡೆಸಿದ್ದರು. </p><p>ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್ನಲ್ಲಿರುವ ಜಿಎಸ್ಟಿವಿ ಕಚೇರಿಯಲ್ಲಿ ಸುಮಾರು 36 ಗಂಟೆ ಶೋಧ ನಡೆಸಿತ್ತು. ಈ ಬೆನ್ನಲ್ಲೇ ಗುರುವಾರ ಸಂಜೆ ಇ.ಡಿ ದಾಳಿ ನಡೆಸಿದೆ ಎಂದು ಜಿಎಸ್ಟಿ.ವಿ (’ಗುಜರಾತ್ ಸಮಾಚಾರ್’ನ ಅಂಗಸಂಸ್ಥೆ) ಡಿಜಿಟಲ್ ವಿಭಾಗದ ಮುಖ್ಯಸ್ಥ ತುಷಾರ್ ದವೆ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<h2><strong>ಕಾಂಗ್ರೆಸ್ ಖಂಡನೆ</strong></h2><p>‘ಗುಜರಾತ್ ಸಮಾಚಾರ್’ ಮಾಲೀಕರ ವಿರುದ್ಧದ ಇ.ಡಿ ಕೈಗೊಂಡರುವ ಕ್ರಮವವನ್ನು ಖಂಡಿಸಿರುವ ಕಾಂಗ್ರೆಸ್ ‘ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುವವರು ಅಥವಾ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳದವರು ಜೈಲಿಗೆ ಹೋಗಬೇಕಾಗುತ್ತದೆ’ ಎಂದು ಟೀಕಿಸಿದೆ.</p><p>‘ಸರ್ಕಾರವು ಸ್ವತಂತ್ರ ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ಟೀಕೆಯು ಪ್ರಜಾಪ್ರಭುತ್ವದ ಆತ್ಮ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿರುವುದನ್ನು ಉಲ್ಲೇಖಿಸಿದ ಖರ್ಗೆ ‘ಟೀಕಿಸುವವರನ್ನು ಬಂಧಿಸುವುದು ಭಯಭೀತ ಸರ್ವಾಧಿಕಾರಿಯ ಮೊದಲ ಲಕ್ಷಣ’ ಎಂದು ಹೇಳಿದ್ದಾರೆ. </p><p>‘ಇದು ಮಾಧ್ಯಮಗಳ ಧ್ವನಿ ಅಡಗಿಸುವುದು ಮಾತ್ರವಲ್ಲ ಪ್ರಜಾಪ್ರಭುತ್ವವನ್ನೂ ದಮನ ಮಾಡುವ ಪ್ರಯತ್ನ’ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗಿದೆ. ಯಾಕೆಂದರೆ ಈ ಪತ್ರಿಕೆಯು ಕಳೆದ 25 ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದೆ’ ಎಂದು ಕಾಂಗ್ರೆಸ್ನ ಮತ್ತೊಬ್ಬ ನಾಯಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ. </p><p>ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಕೂಡ ಬಾಹುಬಲಿ ಶಾ ಬಂಧನ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಯ (ಇ.ಡಿ) ಬಂಧಿಸಿದ್ದ, ‘ಗುಜರಾತ್ ಸಮಾಚಾರ್’ ದಿನಪತ್ರಿಕೆಯ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರಿಗೆ ನ್ಯಾಯಾಲಯ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.</p><p>ಬಂಧನಕ್ಕೆ ಒಳಗಾದ ನಂತರ, ಅವರು ಅಸ್ವಸ್ಥರಾದರು. ಹೀಗಾಗಿ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದೆ.</p><p>ಶಾ ಪರ ವಾದ ಮಂಡಿಸಿದ ವಕೀಲ ದೇವಾಂಗ ವ್ಯಾಸ್,‘ನನ್ನ ಕಕ್ಷಿದಾರ ತನಿಖೆಗೆ ಸಹಕರಿಸುತ್ತಿದ್ದಾರೆ. ತುಸು ಅಸ್ವಸ್ಥರಾಗಿರುವ ಕಾರಣ ವೈದ್ಯಕೀಯ ಕಾರಣಗಳಿಗಾಗಿ ಅವರು ಜಾಮೀನು ಕೋರಿದ್ದಾರೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p><p>ಇ.ಡಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸದ ಕಾರಣ, ವೈದ್ಯಕೀಯ ಕಾರಣಗಳಿಂದಾಗಿ ಅವರಿಗೆ ಮೇ 31ರ ವರೆಗೆ ಜಾಮೀನು ನೀಡಿ, ಪಿಎಂಎಲ್ಎ ವಿಶೇಷ ನ್ಯಾಯಾಲಯ ಆದೇಶಿಸಿದೆ.</p><p>‘ಶಾ ಬಂಧನಕ್ಕೆ ಕಾರಣ ಗೊತ್ತಾಗಿಲ್ಲ. 30 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸಿರಬಹುದು’ ಎಂದು ಅವರ ಅಣ್ಣ ಶ್ರೇಯಾಂಶ್ ಶಾ ‘ಪ್ರಜಾವಾಣಿ‘ಗೆ ತಿಳಿಸಿದ್ದಾರೆ.</p><p>ಶಾ ಅವರು ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾತೃಸಂಸ್ಥೆ ಲೋಕ್ ಪ್ರಕಾಶನ ಲಿಮಿಟೆಡ್ ನಿರ್ದೇಶಕರಾಗಿದ್ದಾರೆ. ಶೇಯಾಂಶ್ ಶಾ ಅವರು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದಾರೆ.</p><p>ಶಾ ಅವರನ್ನು ಇ.ಡಿ ಗುರುವಾರ ತಡರಾತ್ರಿ ವಶಕ್ಕೆ ಪಡೆದಿತ್ತು. ಇದಕ್ಕೂ ಮುನ್ನ ಇ.ಡಿ ಅಧಿಕಾರಿಗಳು ಅವರ ಕಚೇರಿಗಳಲ್ಲಿ ಶೋಧ ನಡೆಸಿದ್ದರು. </p><p>ಆದಾಯ ತೆರಿಗೆ ಇಲಾಖೆಯು ಅಹಮದಾಬಾದ್ನಲ್ಲಿರುವ ಜಿಎಸ್ಟಿವಿ ಕಚೇರಿಯಲ್ಲಿ ಸುಮಾರು 36 ಗಂಟೆ ಶೋಧ ನಡೆಸಿತ್ತು. ಈ ಬೆನ್ನಲ್ಲೇ ಗುರುವಾರ ಸಂಜೆ ಇ.ಡಿ ದಾಳಿ ನಡೆಸಿದೆ ಎಂದು ಜಿಎಸ್ಟಿ.ವಿ (’ಗುಜರಾತ್ ಸಮಾಚಾರ್’ನ ಅಂಗಸಂಸ್ಥೆ) ಡಿಜಿಟಲ್ ವಿಭಾಗದ ಮುಖ್ಯಸ್ಥ ತುಷಾರ್ ದವೆ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<h2><strong>ಕಾಂಗ್ರೆಸ್ ಖಂಡನೆ</strong></h2><p>‘ಗುಜರಾತ್ ಸಮಾಚಾರ್’ ಮಾಲೀಕರ ವಿರುದ್ಧದ ಇ.ಡಿ ಕೈಗೊಂಡರುವ ಕ್ರಮವವನ್ನು ಖಂಡಿಸಿರುವ ಕಾಂಗ್ರೆಸ್ ‘ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುವವರು ಅಥವಾ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳದವರು ಜೈಲಿಗೆ ಹೋಗಬೇಕಾಗುತ್ತದೆ’ ಎಂದು ಟೀಕಿಸಿದೆ.</p><p>‘ಸರ್ಕಾರವು ಸ್ವತಂತ್ರ ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ಟೀಕೆಯು ಪ್ರಜಾಪ್ರಭುತ್ವದ ಆತ್ಮ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿರುವುದನ್ನು ಉಲ್ಲೇಖಿಸಿದ ಖರ್ಗೆ ‘ಟೀಕಿಸುವವರನ್ನು ಬಂಧಿಸುವುದು ಭಯಭೀತ ಸರ್ವಾಧಿಕಾರಿಯ ಮೊದಲ ಲಕ್ಷಣ’ ಎಂದು ಹೇಳಿದ್ದಾರೆ. </p><p>‘ಇದು ಮಾಧ್ಯಮಗಳ ಧ್ವನಿ ಅಡಗಿಸುವುದು ಮಾತ್ರವಲ್ಲ ಪ್ರಜಾಪ್ರಭುತ್ವವನ್ನೂ ದಮನ ಮಾಡುವ ಪ್ರಯತ್ನ’ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಗುಜರಾತ್ ಸಮಾಚಾರ್ ಮತ್ತು ಅದರ ಮಾಲೀಕರನ್ನು ಗುರಿಯಾಗಿಸಲಾಗಿದೆ. ಯಾಕೆಂದರೆ ಈ ಪತ್ರಿಕೆಯು ಕಳೆದ 25 ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದೆ’ ಎಂದು ಕಾಂಗ್ರೆಸ್ನ ಮತ್ತೊಬ್ಬ ನಾಯಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ. </p><p>ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಕೂಡ ಬಾಹುಬಲಿ ಶಾ ಬಂಧನ ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>