‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಸೇರಿದಂತೆ ಪ್ರಕರಣದ ಆರೋಪಿಗಳು ಪಂಚಕುಲಾದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ (ಎಜೆಎಲ್) ಅಕ್ರಮವಾಗಿ ಹಂಚಿಕೆಯಾದ ನಿವೇಶನದ ಜಾಗವನ್ನು ಬಳಸಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಕಟ್ಟಡ ನಿರ್ಮಿಸುವ ಉದ್ದೇಶದಿಂದ ಈ ಜಾಗವನ್ನು ಸಿಂಡಿಕೇಟ್ ಬ್ಯಾಂಕ್ನಲ್ಲಿ ಅಡಮಾನವಾಗಿ ಇರಿಸಲಾಗಿದೆ. ಈ ಆಸ್ತಿಯ ಮೌಲ್ಯ ₹16.38 ಕೋಟಿಯಷ್ಟಿದೆ’ ಎಂದು ಇ.ಡಿ. ಆರೋಪಿಸಿದೆ.