<p><strong>ನವದೆಹಲಿ</strong> : ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಶೇ 5 ಮೀಸಲಾತಿ ನೀಡುವಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಂಗವಿಕಲರ ಹಕ್ಕುಗಳ ಕಾಯ್ದೆ– 2016 ಅಡಿ ಇದು ಅಧಿಕೃತ ಆದೇಶವಾಗಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>ಜೊತೆಗೆ, ಕಾನೂನು ಪ್ರಕಾರ ಅಂಗವಿಕಲ ಅಭ್ಯರ್ಥಿಗಳಿಗೆ ಸೀಟು ಮೀಸಲಿಡಲು ಗುರುಗೋವಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯಕ್ಕೆ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಅವರ ನೇತೃತ್ವದ ನ್ಯಾಯಪೀಠವು ಸೂಚಿಸಿದೆ.</p>.<p>ಅಂಗವಿಕಲರಿಗೆ ಈ ವಿಶ್ವವಿದ್ಯಾಲಯವು ಕಾನೂನಿನ ಪ್ರಕಾರ ಶೇ 5 ಮೀಸಲಾತಿ ನೀಡದೇ, ಶೇ 3 ಮೀಸಲಾತಿ ನೀಡುತ್ತಿದೆ ಎಂದು ಆರೋಪಿಸಿ ‘ಜಸ್ಟೀಸ್ ಫಾರ್ ಆಲ್’ ಎಂಬ ಸರ್ಕಾರೇತರ ಸಂಸ್ಥೆಯು (ಎನ್ಜಿಒ) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಎಲ್ಲಾ ಕೋರ್ಸ್ಗಳಲ್ಲೂ ಅಂಗವಿಕಲ ಅಭ್ಯರ್ಥಿಗಳಿಗೆ ವಿ.ವಿಯು ಶೇ.5 ಮೀಸಲಾತಿ ನೀಡುತ್ತಿತ್ತು. ಈ ವಿಚಾರದಲ್ಲಿ ಪುನಃ ಆದೇಶ ಹೊರಡಿಸುವ ಅಗತ್ಯವಿಲ್ಲ. ಎಲ್ಲಾ ವರ್ಗಗಳ ಅಂಗವಿಕಲ ಅಭ್ಯರ್ಥಿಗಳಿಗೆ ಸೀಟು ನೀಡಿ ಮೀಸಲಿಟ್ಟಿರುವ ಸೀಟುಗಳು ಭರ್ತಿಯಾಗುವಂತೆ ದೆಹಲಿ ಸರ್ಕಾರ ಮತ್ತು ವಿಶ್ವವಿದ್ಯಾಲಯ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದೆ. </p>.<p>ಮೀಸಲಾತಿಗೆ ಸಂಬಂಧಿಸಿ ಮೇ ತಿಂಗಳಲ್ಲಿ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್, ಈ ಶೈಕ್ಷಣಿಕ ಸಾಲಿನಲ್ಲಿ ಅಂಗವಿಕಲರಿಗೆ ಶೇ 5 ಮೀಸಲಾತಿ ನೀಡುವಂತೆ ವಿ.ವಿಗೆ ಸೂಚಿಸಿತ್ತು. </p>.<p>ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಮಧ್ಯಂತರ ಆದೇಶವನ್ನು ವಿ.ವಿ ಪಾಲಿಸಿಲ್ಲ ಎಂದೂ ಆರೋಪಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಶೇ 5 ಮೀಸಲಾತಿ ನೀಡುವಂತೆ ನೋಡಿಕೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಂಗವಿಕಲರ ಹಕ್ಕುಗಳ ಕಾಯ್ದೆ– 2016 ಅಡಿ ಇದು ಅಧಿಕೃತ ಆದೇಶವಾಗಿದೆ ಎಂದು ಹೈಕೋರ್ಟ್ ಹೇಳಿದೆ.</p>.<p>ಜೊತೆಗೆ, ಕಾನೂನು ಪ್ರಕಾರ ಅಂಗವಿಕಲ ಅಭ್ಯರ್ಥಿಗಳಿಗೆ ಸೀಟು ಮೀಸಲಿಡಲು ಗುರುಗೋವಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯಕ್ಕೆ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಅವರ ನೇತೃತ್ವದ ನ್ಯಾಯಪೀಠವು ಸೂಚಿಸಿದೆ.</p>.<p>ಅಂಗವಿಕಲರಿಗೆ ಈ ವಿಶ್ವವಿದ್ಯಾಲಯವು ಕಾನೂನಿನ ಪ್ರಕಾರ ಶೇ 5 ಮೀಸಲಾತಿ ನೀಡದೇ, ಶೇ 3 ಮೀಸಲಾತಿ ನೀಡುತ್ತಿದೆ ಎಂದು ಆರೋಪಿಸಿ ‘ಜಸ್ಟೀಸ್ ಫಾರ್ ಆಲ್’ ಎಂಬ ಸರ್ಕಾರೇತರ ಸಂಸ್ಥೆಯು (ಎನ್ಜಿಒ) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಎಲ್ಲಾ ಕೋರ್ಸ್ಗಳಲ್ಲೂ ಅಂಗವಿಕಲ ಅಭ್ಯರ್ಥಿಗಳಿಗೆ ವಿ.ವಿಯು ಶೇ.5 ಮೀಸಲಾತಿ ನೀಡುತ್ತಿತ್ತು. ಈ ವಿಚಾರದಲ್ಲಿ ಪುನಃ ಆದೇಶ ಹೊರಡಿಸುವ ಅಗತ್ಯವಿಲ್ಲ. ಎಲ್ಲಾ ವರ್ಗಗಳ ಅಂಗವಿಕಲ ಅಭ್ಯರ್ಥಿಗಳಿಗೆ ಸೀಟು ನೀಡಿ ಮೀಸಲಿಟ್ಟಿರುವ ಸೀಟುಗಳು ಭರ್ತಿಯಾಗುವಂತೆ ದೆಹಲಿ ಸರ್ಕಾರ ಮತ್ತು ವಿಶ್ವವಿದ್ಯಾಲಯ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದೆ. </p>.<p>ಮೀಸಲಾತಿಗೆ ಸಂಬಂಧಿಸಿ ಮೇ ತಿಂಗಳಲ್ಲಿ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್, ಈ ಶೈಕ್ಷಣಿಕ ಸಾಲಿನಲ್ಲಿ ಅಂಗವಿಕಲರಿಗೆ ಶೇ 5 ಮೀಸಲಾತಿ ನೀಡುವಂತೆ ವಿ.ವಿಗೆ ಸೂಚಿಸಿತ್ತು. </p>.<p>ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಮಧ್ಯಂತರ ಆದೇಶವನ್ನು ವಿ.ವಿ ಪಾಲಿಸಿಲ್ಲ ಎಂದೂ ಆರೋಪಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>