ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪತ್ರಕರ್ತರ ಬಂಧನವು ದುರಾದೃಷ್ಟಕರವಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಈ ಕುರಿತು ಮಮತಾ ಬ್ಯಾನರ್ಜಿ ಅವರು ಎಚ್ಚರಿಕೆ ವಹಿಸಬೇಕು. ಇದು ನನ್ನ ಕೋರಿಕೆಯಾಗಿದೆ’ ಎಂದು ತಿಳಿಸಿದ್ದಾರೆ.
‘ಪತ್ರಿಕಾ ಸ್ವಾತಂತ್ರ್ಯವು ಮಾಧ್ಯಮಗಳ ಹಕ್ಕು. ಅದನ್ನು ಹತ್ತಿಕ್ಕಬಾರದು. ಇದು ಮಮತಾ ಬ್ಯಾನರ್ಜಿ ಅವರಲ್ಲಿ ನನ್ನ ಮನವಿ’ ಎಂದು ಅವರು ಹೇಳಿದ್ದಾರೆ.
ರಿಪಬ್ಲಿಕ್ ಬಾಂಗ್ಲಾ ಪತ್ರಕರ್ತ ಸಂತು ಪಾನ್ ಅವರನ್ನು ಫೆ. 19ರಂದು ಬಂಧಿಸಲಾಗಿತ್ತು.
ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಷಹಜಹಾನ್ ಮತ್ತು ಅವರ ಬೆಂಬಲಿಗರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.