ಬಜರಂಗದಳ, ಪಿಎಫ್ಐ(ಪಾಪುಲರ್ ಫ್ರಂಟ್ ಆಫ್ ಇಂಡಿಯಾ) ಸೇರಿದಂತೆ ಜಾತಿ–ಧರ್ಮ, ಸಮುದಾಯಗಳ ನಡುವೆ ದ್ವೇಷ ಹರಡುವ ಎಲ್ಲ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಮುಂದುವರಿದು ಅಂತಹ ಸಂಘಟನೆಗಳನ್ನು ನಿಷೇಧಿಸುವ ಕುರಿತು ಹೇಳಿದೆ. ಕಾಂಗ್ರೆಸ್ ಪ್ರಣಾಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷ ಬಜರಂಗಬಲಿಗೆ (ಹನುಮ) ಅವಮಾನ ಮಾಡಿದೆ ಎಂದು ಹೇಳಿದೆ.