ಪುಣೆ: ಗೂಢಚರ್ಯೆ ಪ್ರಕರಣದ ಆರೋಪಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಸುಳ್ಳುಪತ್ತೆ ಪರೀಕ್ಷೆ, ಧ್ವನಿ ಪರೀಕ್ಷೆ ಮತ್ತು ಮನೋ ವಿಶ್ಲೇಷಣೆಗೆ ಒಳಪಡಿಸಬೇಕು ಎಂದು ಕೋರಿದ್ದ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.