<p><strong>ಚಂಡೀಗಢ</strong>: ದೆಹಲಿಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ , ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ಮೊದಲಿಗೆ ಒಬ್ಬ ಶಂಕಿತನನ್ನು ಬಂಧಿಸಲಾಯಿತು ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.</p><p>ಆತನ ವಿಚಾರಣೆಯ ಸಮಯದಲ್ಲಿ ಸಿಕ್ಕಿದ ಮಾಹಿತಿ ಆಧಾರದ ಮೇಲೆ, ಇನ್ನೊಬ್ಬನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ತಾವು ಹಂಚಿಕೊಂಡ ಮಾಹಿತಿಗೆ ಆರೋಪಿಗಳು ಆನ್ಲೈನ್ ಮೂಲಕ ಹಣ ಸ್ವೀಕರಿಸುತ್ತಿದ್ದರು ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ.</p><p>ಹ್ಯಾಂಡ್ಲರ್ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದು, ಅವನ ಸೂಚನೆಯಂತೆ ಇತರ ಸ್ಥಳೀಯ ಹ್ಯಾಂಡ್ಲರ್ಗಳಿಗೆ ಹಣನ್ನು ರವಾನಿಸುವಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.</p><p>ಬಂಧಿತರಿದ್ದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.</p><p>ಈ ಕಾರ್ಯಾಚರಣೆಯು ಗಡಿಯಾಚೆಗಿನ ಬೇಹುಗಾರಿಕೆ ಜಾಲಗಳನ್ನು ತೊಡೆದು ಹಾಕುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಭದ್ರತೆಗೆ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ ಎಂದು ಯಾದವ್ ಹೇಳಿದ್ದಾರೆ.</p><p>ಹಣಕಾಸಿನ ಜಾಲವನ್ನು ಪತ್ತೆಹಚ್ಚುವುದು ಮತ್ತು ನೆಟ್ವರ್ಕ್ ಒಳಗಿನ ಆಪರೇಟರ್ಗಳು ಹಾಗೂ ಸಂಪರ್ಕಗಳನ್ನು ಗುರುತಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದು, ಪ್ರೋಟೊಕಾಲ್ ಪ್ರಕಾರ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p> .‘ಆಪರೇಷನ್ ಸಿಂಧೂರ’:ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಿದ್ದೇವೆ: IAF.₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ದೆಹಲಿಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ , ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ಮೊದಲಿಗೆ ಒಬ್ಬ ಶಂಕಿತನನ್ನು ಬಂಧಿಸಲಾಯಿತು ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.</p><p>ಆತನ ವಿಚಾರಣೆಯ ಸಮಯದಲ್ಲಿ ಸಿಕ್ಕಿದ ಮಾಹಿತಿ ಆಧಾರದ ಮೇಲೆ, ಇನ್ನೊಬ್ಬನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ತಾವು ಹಂಚಿಕೊಂಡ ಮಾಹಿತಿಗೆ ಆರೋಪಿಗಳು ಆನ್ಲೈನ್ ಮೂಲಕ ಹಣ ಸ್ವೀಕರಿಸುತ್ತಿದ್ದರು ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ.</p><p>ಹ್ಯಾಂಡ್ಲರ್ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದು, ಅವನ ಸೂಚನೆಯಂತೆ ಇತರ ಸ್ಥಳೀಯ ಹ್ಯಾಂಡ್ಲರ್ಗಳಿಗೆ ಹಣನ್ನು ರವಾನಿಸುವಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.</p><p>ಬಂಧಿತರಿದ್ದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.</p><p>ಈ ಕಾರ್ಯಾಚರಣೆಯು ಗಡಿಯಾಚೆಗಿನ ಬೇಹುಗಾರಿಕೆ ಜಾಲಗಳನ್ನು ತೊಡೆದು ಹಾಕುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಭದ್ರತೆಗೆ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ ಎಂದು ಯಾದವ್ ಹೇಳಿದ್ದಾರೆ.</p><p>ಹಣಕಾಸಿನ ಜಾಲವನ್ನು ಪತ್ತೆಹಚ್ಚುವುದು ಮತ್ತು ನೆಟ್ವರ್ಕ್ ಒಳಗಿನ ಆಪರೇಟರ್ಗಳು ಹಾಗೂ ಸಂಪರ್ಕಗಳನ್ನು ಗುರುತಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದು, ಪ್ರೋಟೊಕಾಲ್ ಪ್ರಕಾರ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p> .‘ಆಪರೇಷನ್ ಸಿಂಧೂರ’:ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಪೂರ್ಣಗೊಳಿಸಿದ್ದೇವೆ: IAF.₹300 ಕೋಟಿ ವೆಚ್ಚದ ಬ್ರಹ್ಮೋಸ್ ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>