<p><strong>ನವದೆಹಲಿ:</strong> ಜೈಲುಗಳಲ್ಲಿ ಕೈದಿಗಳ ಸಂಖ್ಯೆಯು ಅತಿಯಾಗುತ್ತಿರುವ ಸಮಸ್ಯೆಗೆ ಪರಿಹಾರವಾಗಿ ಹಾಗೂ ಕೈದಿಗಳ ಪುನರ್ವಸತಿಯ ದೃಷ್ಟಿಯಿಂದ ಮುಕ್ತ ಜೈಲುಗಳನ್ನು ಸ್ಥಾಪಿಸುವುದು ಸೂಕ್ತವಾಗಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಅರೆ ಮುಕ್ತ ಅಥವಾ ಮುಕ್ತ ಜೈಲು ವ್ಯವಸ್ಥೆಗಳು, ಶಿಕ್ಷೆಗೆ ಗುರಿಯಾದವರಿಗೆ ಜೈಲಿನ ಆವರಣದಿಂದ ಹೊರಗಡೆ ಹಗಲು ಹೊತ್ತಿನಲ್ಲಿ ಕೆಲಸ ಮಾಡುವುದಕ್ಕೆ ಕೂಡ ಅವಕಾಶ ಕಲ್ಪಿಸುತ್ತವೆ. ಆ ಮೂಲಕ ಅವರಿಗೆ ಹಣ ಸಂಪಾದಿಸಲು ಅವಕಾಶ ಮಾಡಿಕೊಡುತ್ತವೆ. ಸಂಜೆ ಅವರು ಜೈಲಿಗೆ ಮರಳಬೇಕಾಗುತ್ತದೆ.</p>.<p>ಕೈದಿಗಳು ಸಮಾಜದಲ್ಲಿ ಬೆರೆಯುವಂತೆ ಆಗಲು ಹಾಗೂ ಅವರ ಮೇಲಿನ ಮಾನಸಿಕ ಒತ್ತಡವನ್ನು ತಗ್ಗಿಸಲು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ.</p>.<p>ಜೈಲುಗಳು ಹಾಗೂ ಕೈದಿಗಳಿಗೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರು ಇದ್ದ ವಿಭಾಗೀಯ ಪೀಠವು, ಮುಕ್ತ ಜೈಲುಗಳ ಅಸ್ತಿತ್ವವನ್ನು ದೇಶದಾದ್ಯಂತ ಹೆಚ್ಚಿಸುವ ಬಯಕೆ ತನಗೆ ಇರುವುದಾಗಿ ಹೇಳಿತು.</p>.<p>‘ಜೈಲುಗಳಲ್ಲಿ ಕೈದಿಗಳ ಸಂಖ್ಯೆಯು ವಿಪರೀತ ಆಗುತ್ತಿರುವ ಸಮಸ್ಯೆಗೆ ಒಂದು ಪರಿಹಾರ ಮುಕ್ತ ಜೈಲುಗಳನ್ನು ಸ್ಥಾಪಿಸುವುದು. ಈ ವ್ಯವಸ್ಥೆಯು ರಾಜಸ್ಥಾನದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ’ ಎಂದು ಪೀಠವು ಹೇಳಿದೆ. ಆದರೆ, ಜೈಲುಗಳ ಸುಧಾರಣೆಗೆ ಸಂಬಂಧಿಸಿದ ವಿಚಾರವನ್ನು ತಾನು ಆಲಿಸಲು ಮುಂದಾಗುವುದಿಲ್ಲ, ಅದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಬೇರೆ ಪೀಠಗಳು ಈಗಾಗಲೇ ವಿಚಾರಣೆಗೆ ಎತ್ತಿಕೊಂಡಿವೆ ಎಂಬುದನ್ನು ಪೀಠವು ಸ್ಪಷ್ಟಪಡಿಸಿತು.</p>.<p>ಮುಕ್ತ ಜೈಲು ವ್ಯವಸ್ಥೆಯ ಬಗ್ಗೆ ಎಲ್ಲ ರಾಜ್ಯಗಳಿಂದ ಪ್ರತಿಕ್ರಿಯೆ ಕೋರಲಾಗಿದೆ, 24 ರಾಜ್ಯಗಳು ಪ್ರತಿಕ್ರಿಯೆ ಸಲ್ಲಿಸಿವೆ ಎಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜೈಲುಗಳಲ್ಲಿ ಕೈದಿಗಳ ಸಂಖ್ಯೆಯು ಅತಿಯಾಗುತ್ತಿರುವ ಸಮಸ್ಯೆಗೆ ಪರಿಹಾರವಾಗಿ ಹಾಗೂ ಕೈದಿಗಳ ಪುನರ್ವಸತಿಯ ದೃಷ್ಟಿಯಿಂದ ಮುಕ್ತ ಜೈಲುಗಳನ್ನು ಸ್ಥಾಪಿಸುವುದು ಸೂಕ್ತವಾಗಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಅರೆ ಮುಕ್ತ ಅಥವಾ ಮುಕ್ತ ಜೈಲು ವ್ಯವಸ್ಥೆಗಳು, ಶಿಕ್ಷೆಗೆ ಗುರಿಯಾದವರಿಗೆ ಜೈಲಿನ ಆವರಣದಿಂದ ಹೊರಗಡೆ ಹಗಲು ಹೊತ್ತಿನಲ್ಲಿ ಕೆಲಸ ಮಾಡುವುದಕ್ಕೆ ಕೂಡ ಅವಕಾಶ ಕಲ್ಪಿಸುತ್ತವೆ. ಆ ಮೂಲಕ ಅವರಿಗೆ ಹಣ ಸಂಪಾದಿಸಲು ಅವಕಾಶ ಮಾಡಿಕೊಡುತ್ತವೆ. ಸಂಜೆ ಅವರು ಜೈಲಿಗೆ ಮರಳಬೇಕಾಗುತ್ತದೆ.</p>.<p>ಕೈದಿಗಳು ಸಮಾಜದಲ್ಲಿ ಬೆರೆಯುವಂತೆ ಆಗಲು ಹಾಗೂ ಅವರ ಮೇಲಿನ ಮಾನಸಿಕ ಒತ್ತಡವನ್ನು ತಗ್ಗಿಸಲು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ.</p>.<p>ಜೈಲುಗಳು ಹಾಗೂ ಕೈದಿಗಳಿಗೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರು ಇದ್ದ ವಿಭಾಗೀಯ ಪೀಠವು, ಮುಕ್ತ ಜೈಲುಗಳ ಅಸ್ತಿತ್ವವನ್ನು ದೇಶದಾದ್ಯಂತ ಹೆಚ್ಚಿಸುವ ಬಯಕೆ ತನಗೆ ಇರುವುದಾಗಿ ಹೇಳಿತು.</p>.<p>‘ಜೈಲುಗಳಲ್ಲಿ ಕೈದಿಗಳ ಸಂಖ್ಯೆಯು ವಿಪರೀತ ಆಗುತ್ತಿರುವ ಸಮಸ್ಯೆಗೆ ಒಂದು ಪರಿಹಾರ ಮುಕ್ತ ಜೈಲುಗಳನ್ನು ಸ್ಥಾಪಿಸುವುದು. ಈ ವ್ಯವಸ್ಥೆಯು ರಾಜಸ್ಥಾನದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ’ ಎಂದು ಪೀಠವು ಹೇಳಿದೆ. ಆದರೆ, ಜೈಲುಗಳ ಸುಧಾರಣೆಗೆ ಸಂಬಂಧಿಸಿದ ವಿಚಾರವನ್ನು ತಾನು ಆಲಿಸಲು ಮುಂದಾಗುವುದಿಲ್ಲ, ಅದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಬೇರೆ ಪೀಠಗಳು ಈಗಾಗಲೇ ವಿಚಾರಣೆಗೆ ಎತ್ತಿಕೊಂಡಿವೆ ಎಂಬುದನ್ನು ಪೀಠವು ಸ್ಪಷ್ಟಪಡಿಸಿತು.</p>.<p>ಮುಕ್ತ ಜೈಲು ವ್ಯವಸ್ಥೆಯ ಬಗ್ಗೆ ಎಲ್ಲ ರಾಜ್ಯಗಳಿಂದ ಪ್ರತಿಕ್ರಿಯೆ ಕೋರಲಾಗಿದೆ, 24 ರಾಜ್ಯಗಳು ಪ್ರತಿಕ್ರಿಯೆ ಸಲ್ಲಿಸಿವೆ ಎಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>