<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಇರುವ ವಿಚಾರವಾಗಿ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬುಧವಾರ ಪ್ರಶ್ನಿಸಿದೆ.</p><p>ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ, ಇ.ಡಿ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್(ಎಎಸ್ಜಿ) ಎಸ್.ವಿ.ರಾಜು ಅವರನ್ನು ಈ ಕುರಿತು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ‘ಶಿಕ್ಷೆ ಪ್ರಮಾಣ ಶೇ 60–70ರಷ್ಟು ಇದ್ದರೂ, ಅದು ಕಳಪೆ ಸಾಧನೆಯೇ’ ಎಂದು ಹೇಳಿದೆ.</p><p>ಶಾಲಾ ನೇಮಕಾತಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಅವರನ್ನು 2022ರ ಜುಲೈ 23ರಂದು ಇ.ಡಿ ಬಂಧಿಸಿತ್ತು.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಚಟರ್ಜಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿತು.</p><p>‘ಪಾರ್ಥ ಚಟರ್ಜಿ ಅವರು ಎರಡು ವರ್ಷಕ್ಕೂ ಹೆಚ್ಚು ಸೆರೆವಾಸದಲ್ಲಿದ್ದಾರೆ. ಪ್ರಕರಣದ ವಿಚಾರಣೆ ಇನ್ನೂ ಆರಂಭವಾಗಬೇಕಿದೆ. ಪರಿಸ್ಥಿತಿ ಹೀಗಿರುವಾಗ ಇನ್ನೂ ಎಷ್ಟು ವರ್ಷ ಅವರು ಜೈಲಿನಲ್ಲಿರಬೇಕು’ ಎಂದು ಎಎಸ್ಜಿ ರಾಜು ಅವರನ್ನು ಪೀಠವು ಪ್ರಶ್ನಿಸಿದೆ.</p><p>‘ಪಾರ್ಥ ಚಟರ್ಜಿ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿರುವುದನ್ನು ನಿರ್ಲಕ್ಷಿಸುವಂತಿಲ್ಲ. ಹಾಗಂತ ಅವರನ್ನು ಎಷ್ಟು ದಿನ ಜೈಲಿನಲ್ಲಿರಿಸುವುದು? ಅವರಿಗೆ ಜಾಮೀನು ನೀಡದಿದ್ದರೆ ಏನಾಗುತ್ತದೆ’ ಎಂದೂ ಪ್ರಶ್ನಿಸಿದೆ.</p><p>‘ಈ ಪ್ರಕರಣದಲ್ಲಿ 183 ಸಾಕ್ಷಿಗಳಿದ್ದು, ವಿಚಾರಣೆಯೂ ಆರಂಭವಾಗಿಲ್ಲ. ಈಗಾಗಲೇ 2.5– 3 ವರ್ಷ ಕಳೆದಿದ್ದು, ಇದು ಅಲ್ಪ ಅವಧಿಯೂ ಅಲ್ಲ. ವಿಚಾರಣೆ ಪೂರ್ಣಗೊಂಡು ಅಂತಿಮವಾಗಿ ಅವರಿಗೆ ಶಿಕ್ಷೆಯಾಗದಿದ್ದರೆ ಏನಾಗಬಹುದು? ಎಂದು ಜಾರಿ ನಿರ್ದೆಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.</p><p>ಚಟರ್ಜಿ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ‘ಬಂಧನಕ್ಕೆ ಒಳಗಾದ ದಿನದಿಂದಲೂ ಪಾರ್ಥ ಚಟರ್ಜಿ ಸೆರೆವಾಸದಲ್ಲಿದ್ದಾರೆ. 73 ವರ್ಷದ ಅವರ ಆರೋಗ್ಯ ಸರಿ ಇಲ್ಲ’ ಎಂದು ಪೀಠಕ್ಕೆ ತಿಳಿಸಿದರು. </p><p>‘ಪಾರ್ಥ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಇದ್ದು, 50 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತೊಂದರೆಯಾಗಿದೆ’ ಎಂದ ಎಎಸ್ಜಿ ರಾಜು, ಪಾರ್ಥ ಅವರ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದರು.</p><p>ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಇರುವ ವಿಚಾರವಾಗಿ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು (ಇ.ಡಿ) ಬುಧವಾರ ಪ್ರಶ್ನಿಸಿದೆ.</p><p>ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ, ಇ.ಡಿ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್(ಎಎಸ್ಜಿ) ಎಸ್.ವಿ.ರಾಜು ಅವರನ್ನು ಈ ಕುರಿತು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ‘ಶಿಕ್ಷೆ ಪ್ರಮಾಣ ಶೇ 60–70ರಷ್ಟು ಇದ್ದರೂ, ಅದು ಕಳಪೆ ಸಾಧನೆಯೇ’ ಎಂದು ಹೇಳಿದೆ.</p><p>ಶಾಲಾ ನೇಮಕಾತಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಅವರನ್ನು 2022ರ ಜುಲೈ 23ರಂದು ಇ.ಡಿ ಬಂಧಿಸಿತ್ತು.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಚಟರ್ಜಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿತು.</p><p>‘ಪಾರ್ಥ ಚಟರ್ಜಿ ಅವರು ಎರಡು ವರ್ಷಕ್ಕೂ ಹೆಚ್ಚು ಸೆರೆವಾಸದಲ್ಲಿದ್ದಾರೆ. ಪ್ರಕರಣದ ವಿಚಾರಣೆ ಇನ್ನೂ ಆರಂಭವಾಗಬೇಕಿದೆ. ಪರಿಸ್ಥಿತಿ ಹೀಗಿರುವಾಗ ಇನ್ನೂ ಎಷ್ಟು ವರ್ಷ ಅವರು ಜೈಲಿನಲ್ಲಿರಬೇಕು’ ಎಂದು ಎಎಸ್ಜಿ ರಾಜು ಅವರನ್ನು ಪೀಠವು ಪ್ರಶ್ನಿಸಿದೆ.</p><p>‘ಪಾರ್ಥ ಚಟರ್ಜಿ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿರುವುದನ್ನು ನಿರ್ಲಕ್ಷಿಸುವಂತಿಲ್ಲ. ಹಾಗಂತ ಅವರನ್ನು ಎಷ್ಟು ದಿನ ಜೈಲಿನಲ್ಲಿರಿಸುವುದು? ಅವರಿಗೆ ಜಾಮೀನು ನೀಡದಿದ್ದರೆ ಏನಾಗುತ್ತದೆ’ ಎಂದೂ ಪ್ರಶ್ನಿಸಿದೆ.</p><p>‘ಈ ಪ್ರಕರಣದಲ್ಲಿ 183 ಸಾಕ್ಷಿಗಳಿದ್ದು, ವಿಚಾರಣೆಯೂ ಆರಂಭವಾಗಿಲ್ಲ. ಈಗಾಗಲೇ 2.5– 3 ವರ್ಷ ಕಳೆದಿದ್ದು, ಇದು ಅಲ್ಪ ಅವಧಿಯೂ ಅಲ್ಲ. ವಿಚಾರಣೆ ಪೂರ್ಣಗೊಂಡು ಅಂತಿಮವಾಗಿ ಅವರಿಗೆ ಶಿಕ್ಷೆಯಾಗದಿದ್ದರೆ ಏನಾಗಬಹುದು? ಎಂದು ಜಾರಿ ನಿರ್ದೆಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.</p><p>ಚಟರ್ಜಿ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ‘ಬಂಧನಕ್ಕೆ ಒಳಗಾದ ದಿನದಿಂದಲೂ ಪಾರ್ಥ ಚಟರ್ಜಿ ಸೆರೆವಾಸದಲ್ಲಿದ್ದಾರೆ. 73 ವರ್ಷದ ಅವರ ಆರೋಗ್ಯ ಸರಿ ಇಲ್ಲ’ ಎಂದು ಪೀಠಕ್ಕೆ ತಿಳಿಸಿದರು. </p><p>‘ಪಾರ್ಥ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಇದ್ದು, 50 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತೊಂದರೆಯಾಗಿದೆ’ ಎಂದ ಎಎಸ್ಜಿ ರಾಜು, ಪಾರ್ಥ ಅವರ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದರು.</p><p>ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>