ಲಖನೌ: ‘2017ಕ್ಕೂ ಮೊದಲು ನಿರಾಶೆ, ಹತಾಶೆ ಹಾಗೂ ಅರಾಜಕತೆಗಳೇ ತುಂಬಿದ್ದ ರಾಜ್ಯದ ಪ್ರಗತಿ ಕಂಡು ಪ್ರತಿಯೊಬ್ಬ ಭಾರತೀಯನಿಗೂ ಸಂತಸವಾಗುತ್ತಿದ್ದು, ಇಡೀ ವಿಶ್ವವೇ ಆಶ್ಚರ್ಯಚಕಿತವಾಗಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
‘ಈ ಹಿಂದೆ ಆರು–ಏಳನೇ ಸ್ಥಾನದಲ್ಲಿದ್ದ ರಾಜ್ಯದ ಆರ್ಥಿಕತೆ ಈ ಏಳು ವರ್ಷಗಳಲ್ಲಿ ದೇಶದಲ್ಲೇ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಪ್ರಸ್ತುತ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚಿನ ಬೆಳವಣಿಗೆ ದರ ಹಾಗೂ ಆರ್ಥಿಕ ಅಭಿವೃದ್ಧಿ ದರ ಹೊಂದಿದ್ದು, ದೇಶದ ಅತಿದೊಡ್ಡ ಆರ್ಥಿಕತೆಯಾಗುವತ್ತ ದಾಪುಗಾಲಿಟ್ಟಿದೆ’ ಎಂದು ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.
2017ರಲ್ಲಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವನ್ನು ಮಣಿಸಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು.