<p class="title"><strong>ನವದೆಹಲಿ:</strong> ‘ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿಯೇ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಣ್ಣಿಸಿದ್ದಾರೆ.</p>.<p class="title">‘ಈ ರೈತರಿಗೆ ಅವರ ಹಕ್ಕುಗಳು ಮರಳಿ ಸಿಗುತ್ತವೆ. ದೇಶದಲ್ಲಿ ಈಗ ಚಂಪಾರಣ್ ಸತ್ಯಾಗ್ರಹ ಮಾದರಿ ಹೋರಾಟ ನಡೆದಿದೆ. ಅಂದು ಬ್ರಿಟೀಷರು ಕಂಪನಿಗಳಿಗೆ ಬೆನ್ನೆಲುಬಾಗಿದ್ದರು, ಈಗ ಮೋದಿ ಮತ್ತು ಗೆಳೆಯರು ‘ಕಂಪನಿ ಬಹಾದ್ದೂರ್’ಗಳಾಗಿದ್ದಾರೆ’ ಎಂದು ಈ ಕುರಿತು ಮಾಡಿರುವ ಟ್ವೀಟ್ನಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p class="title">1917ರಲ್ಲಿ ನಡೆದಿದ್ದ ಚಂಪಾರಣ್ ಸತ್ಯಾಗ್ರಹವು ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ್ದಾಗಿತ್ತು. ಇದರ ನೇತೃತ್ವವನ್ನು ಮಹಾತ್ಮಗಾಂಧಿ ವಹಿಸಿದ್ದರು. ಕೃಷಿ ಸಮಸ್ಯೆಗಳಿಗೆ ಸಂಬಂಧಿಸಿದ ಹೋರಾಟ ಬಿಹಾರದ ಚಂಪಾರಣ್ನಲ್ಲಿ ಆರಂಭವಾಗಿತ್ತು.</p>.<p class="title">ಹಾಲಿ ನಡೆಯುತ್ತಿರುವ ಕೃಷಿಕರ ಹೋರಾಟವನ್ನು ಬೆಂಬಲಿಸಿರುವ ಕಾಂಗ್ರೆಸ್, ಕೃಷಿ ತಿದ್ದುಪಡಿಯ ಮೂರು ಕಾಯ್ದೆಗಳನ್ನು ರದ್ದುಪಡಿಸಲು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿಯೇ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಣ್ಣಿಸಿದ್ದಾರೆ.</p>.<p class="title">‘ಈ ರೈತರಿಗೆ ಅವರ ಹಕ್ಕುಗಳು ಮರಳಿ ಸಿಗುತ್ತವೆ. ದೇಶದಲ್ಲಿ ಈಗ ಚಂಪಾರಣ್ ಸತ್ಯಾಗ್ರಹ ಮಾದರಿ ಹೋರಾಟ ನಡೆದಿದೆ. ಅಂದು ಬ್ರಿಟೀಷರು ಕಂಪನಿಗಳಿಗೆ ಬೆನ್ನೆಲುಬಾಗಿದ್ದರು, ಈಗ ಮೋದಿ ಮತ್ತು ಗೆಳೆಯರು ‘ಕಂಪನಿ ಬಹಾದ್ದೂರ್’ಗಳಾಗಿದ್ದಾರೆ’ ಎಂದು ಈ ಕುರಿತು ಮಾಡಿರುವ ಟ್ವೀಟ್ನಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p class="title">1917ರಲ್ಲಿ ನಡೆದಿದ್ದ ಚಂಪಾರಣ್ ಸತ್ಯಾಗ್ರಹವು ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ್ದಾಗಿತ್ತು. ಇದರ ನೇತೃತ್ವವನ್ನು ಮಹಾತ್ಮಗಾಂಧಿ ವಹಿಸಿದ್ದರು. ಕೃಷಿ ಸಮಸ್ಯೆಗಳಿಗೆ ಸಂಬಂಧಿಸಿದ ಹೋರಾಟ ಬಿಹಾರದ ಚಂಪಾರಣ್ನಲ್ಲಿ ಆರಂಭವಾಗಿತ್ತು.</p>.<p class="title">ಹಾಲಿ ನಡೆಯುತ್ತಿರುವ ಕೃಷಿಕರ ಹೋರಾಟವನ್ನು ಬೆಂಬಲಿಸಿರುವ ಕಾಂಗ್ರೆಸ್, ಕೃಷಿ ತಿದ್ದುಪಡಿಯ ಮೂರು ಕಾಯ್ದೆಗಳನ್ನು ರದ್ದುಪಡಿಸಲು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>