<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಒಂದೆರಡು ಹೊಸ ಅರ್ಜಿಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಎಲ್ಲರೂ ಪತ್ರಿಕೆಗಳಲ್ಲಿ ಹೆಸರು ಪ್ರಕಟವಾಗಬೇಕೆಂದು ಬಯಸುತ್ತಾರೆ ಎಂದು ಹೇಳಿದೆ.</p><p>ಮುಖ್ಯ ನ್ಯಾಯಮೂರ್ತಿ ಬಿ.ರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಮೇ 20 ರಂದು ಬಾಕಿ ಇರುವ ಅರ್ಜಿಗಳ ಕುರಿತು ವಿಚಾರಣೆ ನಡೆಸುವುದಾಗಿ ಹೇಳಿದೆ.</p><p>ವಕ್ಫ್ ತಿದ್ದುಪಡಿ ಕಾಯ್ದೆ,ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶುಕ್ರವಾರ ಒಂದು ಅರ್ಜಿ ವಿಚಾರಣೆಗೆ ಬಂದ ತಕ್ಷಣ, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತಂತೆ ಅಂತ್ಯವಿಲ್ಲದಷ್ಟು ಅರ್ಜಿಗಳ ಸಲ್ಲಿಕೆಗೆ ಅನುಮತಿ ನೀಡಬಾರದು ಎಂದು ಕೋರಿದರು.</p><p>ಅರ್ಜಿದಾರರ ಪರ ಹಾಜರಾದ ವಕೀಲರು ಏಪ್ರಿಲ್ 8ರಂದು ಅರ್ಜಿ ಸಲ್ಲಿಸಿರುವುದಾಗಿ ಮತ್ತು ಏಪ್ರಿಲ್ 15ರಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸೂಚಿಸಿದ ದೋಷಗಳನ್ನು ತೆಗೆದುಹಾಕಲಾಗಿದೆ. ಆದರೂ, ನಮ್ಮ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಪ್ರತಿಯೊಬ್ಬರಿಗೂ ದಿನಪತ್ರಿಕೆಯಲ್ಲಿ ಹೆಸರು ಬರಬೇಕೆಂಬ ಬಯಕೆ ಇದೆ ಎಂದರು.</p><p>ಈಗ ಬಾಕಿ ಇರುವ ಅರ್ಜಿಗಳ ಜೊತೆ ಇದನ್ನೂ ವಿಚಾರಣೆಗೆ ಪರಿಗಣಿಸಬೇಕು ಎಂಬ ವಕೀಲರ ವಾದ ತಳ್ಳಿಹಾಕಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು. ಇದೇವೇಳೆ, ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನೂ ವಜಾಗೊಳಿಸಲಾಯಿತು.</p><p>ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ತನ್ನ ಮುಂದೆ ಇರುವ ಒಟ್ಟು ಅರ್ಜಿಗಳಲ್ಲಿ ಕೇವಲ ಐದು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡಲು ಏಪ್ರಿಲ್ 17ರಂದು ಸುಪ್ರೀಂ ಕೋರ್ಟ್ ನಿರ್ಧರಿಸಿತ್ತು.</p><p>ಈ ಅರ್ಜಿಗಳು ಮೇ 15ರಂದು ಸಿಜೆಐ ಮತ್ತು ನ್ಯಾಯಮೂರ್ತಿ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬಂದವು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಒಂದೆರಡು ಹೊಸ ಅರ್ಜಿಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಎಲ್ಲರೂ ಪತ್ರಿಕೆಗಳಲ್ಲಿ ಹೆಸರು ಪ್ರಕಟವಾಗಬೇಕೆಂದು ಬಯಸುತ್ತಾರೆ ಎಂದು ಹೇಳಿದೆ.</p><p>ಮುಖ್ಯ ನ್ಯಾಯಮೂರ್ತಿ ಬಿ.ರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಮೇ 20 ರಂದು ಬಾಕಿ ಇರುವ ಅರ್ಜಿಗಳ ಕುರಿತು ವಿಚಾರಣೆ ನಡೆಸುವುದಾಗಿ ಹೇಳಿದೆ.</p><p>ವಕ್ಫ್ ತಿದ್ದುಪಡಿ ಕಾಯ್ದೆ,ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶುಕ್ರವಾರ ಒಂದು ಅರ್ಜಿ ವಿಚಾರಣೆಗೆ ಬಂದ ತಕ್ಷಣ, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತಂತೆ ಅಂತ್ಯವಿಲ್ಲದಷ್ಟು ಅರ್ಜಿಗಳ ಸಲ್ಲಿಕೆಗೆ ಅನುಮತಿ ನೀಡಬಾರದು ಎಂದು ಕೋರಿದರು.</p><p>ಅರ್ಜಿದಾರರ ಪರ ಹಾಜರಾದ ವಕೀಲರು ಏಪ್ರಿಲ್ 8ರಂದು ಅರ್ಜಿ ಸಲ್ಲಿಸಿರುವುದಾಗಿ ಮತ್ತು ಏಪ್ರಿಲ್ 15ರಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸೂಚಿಸಿದ ದೋಷಗಳನ್ನು ತೆಗೆದುಹಾಕಲಾಗಿದೆ. ಆದರೂ, ನಮ್ಮ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಪ್ರತಿಯೊಬ್ಬರಿಗೂ ದಿನಪತ್ರಿಕೆಯಲ್ಲಿ ಹೆಸರು ಬರಬೇಕೆಂಬ ಬಯಕೆ ಇದೆ ಎಂದರು.</p><p>ಈಗ ಬಾಕಿ ಇರುವ ಅರ್ಜಿಗಳ ಜೊತೆ ಇದನ್ನೂ ವಿಚಾರಣೆಗೆ ಪರಿಗಣಿಸಬೇಕು ಎಂಬ ವಕೀಲರ ವಾದ ತಳ್ಳಿಹಾಕಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು. ಇದೇವೇಳೆ, ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನೂ ವಜಾಗೊಳಿಸಲಾಯಿತು.</p><p>ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ತನ್ನ ಮುಂದೆ ಇರುವ ಒಟ್ಟು ಅರ್ಜಿಗಳಲ್ಲಿ ಕೇವಲ ಐದು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡಲು ಏಪ್ರಿಲ್ 17ರಂದು ಸುಪ್ರೀಂ ಕೋರ್ಟ್ ನಿರ್ಧರಿಸಿತ್ತು.</p><p>ಈ ಅರ್ಜಿಗಳು ಮೇ 15ರಂದು ಸಿಜೆಐ ಮತ್ತು ನ್ಯಾಯಮೂರ್ತಿ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬಂದವು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>