<p><strong>ಇಂಫಾಲ್</strong>: ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ಶಾಸಕರಾದ ಸಪಮ್ ಕೇಬಾ ಮತ್ತು ಕೆ. ಇಬೊಮ್ಚಾ ಮಂಗಳವಾರ ಹೇಳಿದರು.</p>.<p>ಬಿಜೆಪಿ ಈಶಾನ್ಯ ರಾಜ್ಯಗಳ ಉಸ್ತುವಾರಿ ಸಂಬಿತ್ ಪಾತ್ರಾ ಅವರ ಜೊತೆ ಮಾತುಕತೆ ನಡೆಸಿದ ಈ ಇಬ್ಬರು ಶಾಸಕರು, ರಾಜ್ಯದಲ್ಲಿ ಶಾಂತಿ ನೆಲಸುವಂತೆ ಮಾಡಲು ಪ್ರಯತ್ನ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ತಾವು ಮನವಿ ಮಾಡಿದ್ದುದಾಗಿ ತಿಳಿಸಿದರು.</p>.<p>ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಲಮಿತಿ ಇದೆಯೇ ಎಂಬ ಪ್ರಶ್ನೆಗೆ ಕೇಬಾ ಅವರು, ‘ಆ ಕುರಿತು ನಾವು ಚರ್ಚೆ ನಡೆಸಲಿಲ್ಲ’ ಎಂದರು. ‘ಎಲ್ಲವೂ ಕೇಂದ್ರದ ಕೈಯಲ್ಲಿದೆ. ನಾವು ಯಾವುದೇ ಹೇಳಿಕೆ ನೀಡಲಾಗದು. ನಾವು ಸೌಜನ್ಯದ ಭೇಟಿಗಾಗಿ ಇಲ್ಲಿದ್ದೇವೆ’ ಎಂದು ಇಬೊಮ್ಚಾ ಹೇಳಿದರು.</p>.<p>ಎನ್. ಬಿರೇನ್ ಸಿಂಗ್ ಅವರು ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಾತ್ರಾ ಅವರು ಮಣಿಪುರದಲ್ಲೇ ಠಿಕಾಣಿ ಹೂಡಿದ್ದಾರೆ. ಪಕ್ಷದ ಹಲವು ಶಾಸಕರು, ಸಚಿವರು ಮತ್ತು ವಿಧಾನಸಭೆಯ ಸ್ಪೀಕರ್ ಜೊತೆ ಪಾತ್ರಾ ಸಭೆ ನಡೆಸಿದ್ದಾರೆ.</p>.<p>ಸಂಘರ್ಷಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಶಾಂತಿ ಮತ್ತೆ ನೆಲಸುವಂತೆ ಮಾಡುವ ಬಗ್ಗೆ ಸೋಮವಾರದ ಸಭೆಗಳಲ್ಲಿ ಚರ್ಚೆಯಾಗಿದೆ. ಹೊಸ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಹೆಚ್ಚು ಮಾತುಕತೆ ನಡೆದಿಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ.</p>.<p>ರಾಜ್ಯಪಾಲರ ಭೇಟಿ: ಸಂಬಿತ್ ಪಾತ್ರಾ ಅವರು ಬಿಜೆಪಿ ಮಣಿಪುರ ಘಟಕದ ಅಧ್ಯಕ್ಷೆ ಎ. ಶಾರದಾದೇವಿ ಅವರೊಂದಿಗೆ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿ, ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು. </p>.<p><strong>ಪತ್ರಕರ್ತನ ಅಪಹರಣ ಬಿಡುಗಡೆ </strong></p><p>ಮಣಿಪುರದ ಹಿರಿಯ ಪತ್ರಕರ್ತ ಯಾಂಬೆನ್ ಲಾಬಾ ಅವರನ್ನು ಮಂಗಳವಾರ ನಸುಕಿನಲ್ಲಿ ಅಪಹರಿಸಿದ ನಿಷೇಧಿತ ಸಂಘಟನೆಯೊಂದು ಅವರು ಕ್ಷಮೆ ಯಾಚಿಸಿದ ನಂತರ ಬಿಡುಗಡೆ ಮಾಡಿದೆ ಎನ್ನಲಾಗಿದೆ. ಈ ಸಂಘಟನೆಯನ್ನು ಲಾಬಾ ಅವರು ‘ಶರಣಾಗಿರುವ ಗುಂಪು’ ಎಂದು ಕರೆದಿದ್ದರು. ಮಾಧ್ಯಮ ಚರ್ಚೆಯೊಂದರಲ್ಲಿ ಭಾಗಿಯಾಗಿದ್ದ ಲಾಬಾ ಅವರು ಈ ಮಾತು ಹೇಳಿದ್ದರು ಎನ್ನಲಾಗಿದೆ. ನಸುಕಿನ 3 ಗಂಟೆಯ ಸಮಯದಲ್ಲಿ ಲಾಬಾ ಮನೆ ಬಳಿಗೆ ಬಂದ ಶಸ್ತ್ರಧಾರಿಗಳ ಗುಂಪು ಅವರನ್ನು ಬಲವಂತವಾಗಿ ತಮ್ಮೊಂದಿಗೆ ಕರೆದೊಯ್ಯಿತು. ಘಟನೆ ಕುರಿತು ಲಾಬಾ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ಶಾಸಕರಾದ ಸಪಮ್ ಕೇಬಾ ಮತ್ತು ಕೆ. ಇಬೊಮ್ಚಾ ಮಂಗಳವಾರ ಹೇಳಿದರು.</p>.<p>ಬಿಜೆಪಿ ಈಶಾನ್ಯ ರಾಜ್ಯಗಳ ಉಸ್ತುವಾರಿ ಸಂಬಿತ್ ಪಾತ್ರಾ ಅವರ ಜೊತೆ ಮಾತುಕತೆ ನಡೆಸಿದ ಈ ಇಬ್ಬರು ಶಾಸಕರು, ರಾಜ್ಯದಲ್ಲಿ ಶಾಂತಿ ನೆಲಸುವಂತೆ ಮಾಡಲು ಪ್ರಯತ್ನ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ತಾವು ಮನವಿ ಮಾಡಿದ್ದುದಾಗಿ ತಿಳಿಸಿದರು.</p>.<p>ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಲಮಿತಿ ಇದೆಯೇ ಎಂಬ ಪ್ರಶ್ನೆಗೆ ಕೇಬಾ ಅವರು, ‘ಆ ಕುರಿತು ನಾವು ಚರ್ಚೆ ನಡೆಸಲಿಲ್ಲ’ ಎಂದರು. ‘ಎಲ್ಲವೂ ಕೇಂದ್ರದ ಕೈಯಲ್ಲಿದೆ. ನಾವು ಯಾವುದೇ ಹೇಳಿಕೆ ನೀಡಲಾಗದು. ನಾವು ಸೌಜನ್ಯದ ಭೇಟಿಗಾಗಿ ಇಲ್ಲಿದ್ದೇವೆ’ ಎಂದು ಇಬೊಮ್ಚಾ ಹೇಳಿದರು.</p>.<p>ಎನ್. ಬಿರೇನ್ ಸಿಂಗ್ ಅವರು ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಾತ್ರಾ ಅವರು ಮಣಿಪುರದಲ್ಲೇ ಠಿಕಾಣಿ ಹೂಡಿದ್ದಾರೆ. ಪಕ್ಷದ ಹಲವು ಶಾಸಕರು, ಸಚಿವರು ಮತ್ತು ವಿಧಾನಸಭೆಯ ಸ್ಪೀಕರ್ ಜೊತೆ ಪಾತ್ರಾ ಸಭೆ ನಡೆಸಿದ್ದಾರೆ.</p>.<p>ಸಂಘರ್ಷಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಶಾಂತಿ ಮತ್ತೆ ನೆಲಸುವಂತೆ ಮಾಡುವ ಬಗ್ಗೆ ಸೋಮವಾರದ ಸಭೆಗಳಲ್ಲಿ ಚರ್ಚೆಯಾಗಿದೆ. ಹೊಸ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಹೆಚ್ಚು ಮಾತುಕತೆ ನಡೆದಿಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ.</p>.<p>ರಾಜ್ಯಪಾಲರ ಭೇಟಿ: ಸಂಬಿತ್ ಪಾತ್ರಾ ಅವರು ಬಿಜೆಪಿ ಮಣಿಪುರ ಘಟಕದ ಅಧ್ಯಕ್ಷೆ ಎ. ಶಾರದಾದೇವಿ ಅವರೊಂದಿಗೆ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿ, ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು. </p>.<p><strong>ಪತ್ರಕರ್ತನ ಅಪಹರಣ ಬಿಡುಗಡೆ </strong></p><p>ಮಣಿಪುರದ ಹಿರಿಯ ಪತ್ರಕರ್ತ ಯಾಂಬೆನ್ ಲಾಬಾ ಅವರನ್ನು ಮಂಗಳವಾರ ನಸುಕಿನಲ್ಲಿ ಅಪಹರಿಸಿದ ನಿಷೇಧಿತ ಸಂಘಟನೆಯೊಂದು ಅವರು ಕ್ಷಮೆ ಯಾಚಿಸಿದ ನಂತರ ಬಿಡುಗಡೆ ಮಾಡಿದೆ ಎನ್ನಲಾಗಿದೆ. ಈ ಸಂಘಟನೆಯನ್ನು ಲಾಬಾ ಅವರು ‘ಶರಣಾಗಿರುವ ಗುಂಪು’ ಎಂದು ಕರೆದಿದ್ದರು. ಮಾಧ್ಯಮ ಚರ್ಚೆಯೊಂದರಲ್ಲಿ ಭಾಗಿಯಾಗಿದ್ದ ಲಾಬಾ ಅವರು ಈ ಮಾತು ಹೇಳಿದ್ದರು ಎನ್ನಲಾಗಿದೆ. ನಸುಕಿನ 3 ಗಂಟೆಯ ಸಮಯದಲ್ಲಿ ಲಾಬಾ ಮನೆ ಬಳಿಗೆ ಬಂದ ಶಸ್ತ್ರಧಾರಿಗಳ ಗುಂಪು ಅವರನ್ನು ಬಲವಂತವಾಗಿ ತಮ್ಮೊಂದಿಗೆ ಕರೆದೊಯ್ಯಿತು. ಘಟನೆ ಕುರಿತು ಲಾಬಾ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>