<p>ಶಿಮ್ಲಾ: ‘ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ಎಲ್ಲ ಬಾಗಿಲುಗಳು ತೆರೆದೇ ಇವೆ’ ಎಂದು ಹಿಮಾಚಲ ಪ್ರದೇಶದ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ ಬುಧವಾರ ಹೇಳಿದ್ದಾರೆ.</p>.<p>ಪಕ್ಷಾಂತರ ನಿಷೇಧ ಕಾಯ್ದೆ ಅಡಿ ವಿಧಾನಸಭೆಯಿಂದ ಅನರ್ಹಗೊಂಡ ಕಾಂಗ್ರೆಸ್ನ ಬಂಡಾಯ ಶಾಸಕರೊಂದಿಗೆ ಕೆಲ ದಿನಗಳ ಹಿಂದೆ ಸಭೆ ನಡೆದಿದ್ದು, ‘ಅನರ್ಹಗೊಂಡ ಶಾಸಕರು ಪಕ್ಷಕ್ಕೆ ಮರಳಲಿದ್ದಾರೆಯೇ’ ಎಂದು ಕೇಳಲಾದ ಪ್ರಶ್ನೆಗೆ ವಿಕ್ರಮಾದಿತ್ಯ ಅವರು ಈ ಉತ್ತರ ನೀಡಿದ್ದಾರೆ.</p>.<p>ಇತ್ತೀಚೆಗೆ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಬಂಡಾಯ ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಪಕ್ಷದ ಅಧಿಕೃತ ಅಭ್ಯರ್ಥಿ ಸೋಲು ಅನುಭವಿಸಿದ್ದರು. ಬಂಡಾಯ ಶಾಸಕರ ಈ ನಡೆಯಿಂದ ಬಿಕ್ಕಟ್ಟು ಉದ್ಭವಿಸಿತ್ತು. ಬಳಿಕ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು, ರಾಜ್ಯ ಬಜೆಟ್ ಮತದಾನದ ವೇಳೆ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಈ ಶಾಸಕರನ್ನು ಅನರ್ಹಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಮ್ಲಾ: ‘ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ಎಲ್ಲ ಬಾಗಿಲುಗಳು ತೆರೆದೇ ಇವೆ’ ಎಂದು ಹಿಮಾಚಲ ಪ್ರದೇಶದ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ ಬುಧವಾರ ಹೇಳಿದ್ದಾರೆ.</p>.<p>ಪಕ್ಷಾಂತರ ನಿಷೇಧ ಕಾಯ್ದೆ ಅಡಿ ವಿಧಾನಸಭೆಯಿಂದ ಅನರ್ಹಗೊಂಡ ಕಾಂಗ್ರೆಸ್ನ ಬಂಡಾಯ ಶಾಸಕರೊಂದಿಗೆ ಕೆಲ ದಿನಗಳ ಹಿಂದೆ ಸಭೆ ನಡೆದಿದ್ದು, ‘ಅನರ್ಹಗೊಂಡ ಶಾಸಕರು ಪಕ್ಷಕ್ಕೆ ಮರಳಲಿದ್ದಾರೆಯೇ’ ಎಂದು ಕೇಳಲಾದ ಪ್ರಶ್ನೆಗೆ ವಿಕ್ರಮಾದಿತ್ಯ ಅವರು ಈ ಉತ್ತರ ನೀಡಿದ್ದಾರೆ.</p>.<p>ಇತ್ತೀಚೆಗೆ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಬಂಡಾಯ ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಪಕ್ಷದ ಅಧಿಕೃತ ಅಭ್ಯರ್ಥಿ ಸೋಲು ಅನುಭವಿಸಿದ್ದರು. ಬಂಡಾಯ ಶಾಸಕರ ಈ ನಡೆಯಿಂದ ಬಿಕ್ಕಟ್ಟು ಉದ್ಭವಿಸಿತ್ತು. ಬಳಿಕ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು, ರಾಜ್ಯ ಬಜೆಟ್ ಮತದಾನದ ವೇಳೆ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಈ ಶಾಸಕರನ್ನು ಅನರ್ಹಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>