ಇತ್ತೀಚೆಗೆ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಬಂಡಾಯ ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಪಕ್ಷದ ಅಧಿಕೃತ ಅಭ್ಯರ್ಥಿ ಸೋಲು ಅನುಭವಿಸಿದ್ದರು. ಬಂಡಾಯ ಶಾಸಕರ ಈ ನಡೆಯಿಂದ ಬಿಕ್ಕಟ್ಟು ಉದ್ಭವಿಸಿತ್ತು. ಬಳಿಕ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು, ರಾಜ್ಯ ಬಜೆಟ್ ಮತದಾನದ ವೇಳೆ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಈ ಶಾಸಕರನ್ನು ಅನರ್ಹಗೊಳಿಸಿದ್ದರು.