<p><strong>ಮುಂಬೈ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತದಲ್ಲಿ ಪಾಕ್ನ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಬೆಂಬಲಿಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ದೇಶದ ಶಾಂತಿಯನ್ನು ಕದಡಲು ಮತ್ತು ಮುಗ್ಧ ಜನರನ್ನು ಕೊಲ್ಲಲು ಪ್ರಯತ್ನಿಸುವವರೊಂದಿಗೆ ಎಲ್ಲವನ್ನೂ ನಿಷೇಧಿಸಬೇಕು. ಅದು ಕಲೆಯಾದರೂ (ಮನರಂಜನೆ) ಸರಿ ಅಥವಾ ಕ್ರಿಕೆಟ್ ಆದರೂ ಸರಿ’ ಎಂದು ಹೇಳಿದ್ದಾರೆ.</p><p>‘ಪ್ರಧಾನಿ ಮೋದಿ ಅವರು ಸೇನೆಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿದ್ದಾರೆ. ಸಮವಸ್ತ್ರದಲ್ಲಿರುವ ಸೈನಿಕರು ತಾವು ಮಾಡಬೇಕಾದ್ದನ್ನು ಮಾಡುತ್ತಾರೆಂದು ನಾನು ಭಾವಿಸುತ್ತೇನೆ’ ಎಂದು ಶೆಟ್ಟಿ ಭರವಸೆ ವ್ಯಕ್ತಪಡಿಸಿದ್ದಾರೆ. </p><p>‘ನಾವು ಧರ್ಮ, ಕರ್ಮ ಮತ್ತು ಸೇವೆ ಎಂದು ಹೇಳುವ ದೇಶದಲ್ಲಿದ್ದೇವೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಮಾಡಬೇಕಾಗಿರುವುದು ಇಷ್ಟೇ...ಯಾರಿಗೂ ದ್ವೇಷವನ್ನು ಹರಡಲು ಅವಕಾಶ ನೀಡದೆ, ಒಗ್ಗಟ್ಟಿನಿಂದ ಬದುಕೋಣ’ ಎಂದು ಸುನಿಲ್ ಶೆಟ್ಟಿ ತಿಳಿಸಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p><p>ಪಾಕ್ ನಟ ಫವಾದ್ ಖಾನ್ ನಟಿಸಿರುವ 'ಅಬೀರ್ ಗುಲಾಲ್' ಚಿತ್ರವನ್ನು ಮೇ 9ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿಸುವುದಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.</p>.ಅಪ್ರಚೋದಿತ ದಾಳಿ: ಪಾಕ್ಗೆ ಭಾರತ ಎಚ್ಚರಿಕೆ.ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳಿಗೆ ಭಾರತದಲ್ಲಿ ನಿರ್ಬಂಧ.ಪಾಕ್ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆ ಸ್ಥಗಿತ: ಮೋದಿಗೆ ನಟಿ ಮನವಿ ಹೀಗಿದೆ...ಭಾರತದಲ್ಲಿ ಅಖ್ತರ್, ಅಫ್ರಿದಿ ಯೂಟ್ಯೂಬ್, ಅರ್ಷದ್ ಇನ್ಸ್ಟಾಗ್ರಾಂ ಖಾತೆ ನಿಷೇಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತದಲ್ಲಿ ಪಾಕ್ನ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಬೆಂಬಲಿಸಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ದೇಶದ ಶಾಂತಿಯನ್ನು ಕದಡಲು ಮತ್ತು ಮುಗ್ಧ ಜನರನ್ನು ಕೊಲ್ಲಲು ಪ್ರಯತ್ನಿಸುವವರೊಂದಿಗೆ ಎಲ್ಲವನ್ನೂ ನಿಷೇಧಿಸಬೇಕು. ಅದು ಕಲೆಯಾದರೂ (ಮನರಂಜನೆ) ಸರಿ ಅಥವಾ ಕ್ರಿಕೆಟ್ ಆದರೂ ಸರಿ’ ಎಂದು ಹೇಳಿದ್ದಾರೆ.</p><p>‘ಪ್ರಧಾನಿ ಮೋದಿ ಅವರು ಸೇನೆಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿದ್ದಾರೆ. ಸಮವಸ್ತ್ರದಲ್ಲಿರುವ ಸೈನಿಕರು ತಾವು ಮಾಡಬೇಕಾದ್ದನ್ನು ಮಾಡುತ್ತಾರೆಂದು ನಾನು ಭಾವಿಸುತ್ತೇನೆ’ ಎಂದು ಶೆಟ್ಟಿ ಭರವಸೆ ವ್ಯಕ್ತಪಡಿಸಿದ್ದಾರೆ. </p><p>‘ನಾವು ಧರ್ಮ, ಕರ್ಮ ಮತ್ತು ಸೇವೆ ಎಂದು ಹೇಳುವ ದೇಶದಲ್ಲಿದ್ದೇವೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಮಾಡಬೇಕಾಗಿರುವುದು ಇಷ್ಟೇ...ಯಾರಿಗೂ ದ್ವೇಷವನ್ನು ಹರಡಲು ಅವಕಾಶ ನೀಡದೆ, ಒಗ್ಗಟ್ಟಿನಿಂದ ಬದುಕೋಣ’ ಎಂದು ಸುನಿಲ್ ಶೆಟ್ಟಿ ತಿಳಿಸಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p><p>ಪಾಕ್ ನಟ ಫವಾದ್ ಖಾನ್ ನಟಿಸಿರುವ 'ಅಬೀರ್ ಗುಲಾಲ್' ಚಿತ್ರವನ್ನು ಮೇ 9ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿಸುವುದಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.</p>.ಅಪ್ರಚೋದಿತ ದಾಳಿ: ಪಾಕ್ಗೆ ಭಾರತ ಎಚ್ಚರಿಕೆ.ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳಿಗೆ ಭಾರತದಲ್ಲಿ ನಿರ್ಬಂಧ.ಪಾಕ್ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆ ಸ್ಥಗಿತ: ಮೋದಿಗೆ ನಟಿ ಮನವಿ ಹೀಗಿದೆ...ಭಾರತದಲ್ಲಿ ಅಖ್ತರ್, ಅಫ್ರಿದಿ ಯೂಟ್ಯೂಬ್, ಅರ್ಷದ್ ಇನ್ಸ್ಟಾಗ್ರಾಂ ಖಾತೆ ನಿಷೇಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>