<p><strong>ರಾಮಗಢ:</strong> ‘ವಿದ್ಯುನ್ಮಾನ ಮತಯಂತ್ರಗಳು (EVMs) ಸುರಕ್ಷಿತ ಮತ್ತು ತಿರುಚುವುದು ಅಸಾಧ್ಯ’ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಶನಿವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಭಾರತದಲ್ಲಿ ಬಳಕೆಯಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಿಗೆ ಅಂತರ್ಜಾಲ, ಬ್ಲೂಟೂತ್ ಅಥವಾ ಇನ್ಫ್ರಾರೆಡ್ ಸಂಪರ್ಕ ಅಸಾಧ್ಯ. ಹೀಗಾಗಿ ತಿರುಚಲು ಸಾಧ್ಯವಿಲ್ಲ. ಈ ಕುರಿತು ವಿದ್ಯುನ್ಮಾನ ಮತಯಂತ್ರಗಳ ಕುರಿತು ಕಾನೂನು ಪರಿಶೀಲನೆಯೂ ನಡದಿದೆ’ ಎಂದಿದ್ದಾರೆ.</p><p>ಜಾರ್ಖಂಡ್ ಪ್ರವಾಸದಲ್ಲಿರುವ ಜ್ಞಾನೇಶ್ ಕುಮಾರ್ ಅವರು ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡ 55 ಸ್ವಯಂಸೇವಕರೊಂದಿಗೆ ರಾಮಗಢದಲ್ಲಿ ಸಮಾಲೋಚನೆ ನಡೆಸಿದರು. </p><p>‘ವಿದ್ಯುನ್ಮಾನ ಮತಯಂತ್ರಗಳು ಅಸುರಕ್ಷಿತ. ಮತಪತ್ರಗಳೇ ಹೆಚ್ಚು ಸುರಕ್ಷಿತ’ ಎಂದು ಅಮೆರಿಕದ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬಾರ್ಡ್ ಅವರು ಹೇಳಿದ್ದು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಜ್ಞಾನೇಶ್ ಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮಗಢ:</strong> ‘ವಿದ್ಯುನ್ಮಾನ ಮತಯಂತ್ರಗಳು (EVMs) ಸುರಕ್ಷಿತ ಮತ್ತು ತಿರುಚುವುದು ಅಸಾಧ್ಯ’ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಶನಿವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಭಾರತದಲ್ಲಿ ಬಳಕೆಯಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಿಗೆ ಅಂತರ್ಜಾಲ, ಬ್ಲೂಟೂತ್ ಅಥವಾ ಇನ್ಫ್ರಾರೆಡ್ ಸಂಪರ್ಕ ಅಸಾಧ್ಯ. ಹೀಗಾಗಿ ತಿರುಚಲು ಸಾಧ್ಯವಿಲ್ಲ. ಈ ಕುರಿತು ವಿದ್ಯುನ್ಮಾನ ಮತಯಂತ್ರಗಳ ಕುರಿತು ಕಾನೂನು ಪರಿಶೀಲನೆಯೂ ನಡದಿದೆ’ ಎಂದಿದ್ದಾರೆ.</p><p>ಜಾರ್ಖಂಡ್ ಪ್ರವಾಸದಲ್ಲಿರುವ ಜ್ಞಾನೇಶ್ ಕುಮಾರ್ ಅವರು ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡ 55 ಸ್ವಯಂಸೇವಕರೊಂದಿಗೆ ರಾಮಗಢದಲ್ಲಿ ಸಮಾಲೋಚನೆ ನಡೆಸಿದರು. </p><p>‘ವಿದ್ಯುನ್ಮಾನ ಮತಯಂತ್ರಗಳು ಅಸುರಕ್ಷಿತ. ಮತಪತ್ರಗಳೇ ಹೆಚ್ಚು ಸುರಕ್ಷಿತ’ ಎಂದು ಅಮೆರಿಕದ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬಾರ್ಡ್ ಅವರು ಹೇಳಿದ್ದು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಜ್ಞಾನೇಶ್ ಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>