‘ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನಾದರೂ, ಕೆಲವು ಗಂಟೆಗಳ ಬಳಿಕ ಆತನನ್ನು ಬಂಧಿಸಲಾಯಿತು. ಗುಂಡೇಟಿನಿಂದ ಗಾಯಗೊಂಡಿದ್ದ ರಾಮ್ಮಿಲನ್, ಅಜ್ಜು, ವರ್ಷಾ ಅವರನ್ನು ಬುಂದೇಲಖಂಡ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಾಮ್ ಮಿಲನ್ ಮತ್ತು ಅಜ್ಜು ಮೃತಪಟ್ಟಿದ್ದಾರೆ. ವರ್ಷಾಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದಿದ್ದಾರೆ.