<p class="title"><strong>ನವದೆಹಲಿ:</strong>‘ಸುಪ್ರೀಂ ಕೋರ್ಟ್ನ ಹಿಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಬಾಹ್ಯ ಶಕ್ತಿಗಳ ಪ್ರಭಾವದಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಆರೋಪಿಸಿದ್ದಾರೆ.</p>.<p class="title">ಪ್ರಕರಣಗಳ ಹಂಚಿಕೆಯಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪಕ್ಷಪಾತ ಮಾಡುತ್ತಿದ್ದಾರೆ ಎಂದು2018ರ ಜನವರಿ 18ರಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದ ಸುಪ್ರೀಂ ಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳಲ್ಲಿ ಜೋಸೆಫ್ ಸಹ ಒಬ್ಬರು. ಅವರು ನವೆಂಬರ್ 29ರಂದಷ್ಟೇ ಸೇವೆಯಿಂದ ನಿವೃತ್ತರಾಗಿದ್ದಾರೆ.</p>.<p class="title">‘ಕೆಲವು ಬಾಹ್ಯ ಶಕ್ತಿಗಳು ದೀಪಕ್ ಮಿಶ್ರಾ ಅವರನ್ನು ರಿಮೋಟ್ನಂತೆ ನಿಯಂತ್ರಿಸುತ್ತಿದ್ದವು. ಆ ಶಕ್ತಿಗಳ ಪ್ರಭಾವವು ನ್ಯಾಯಾಂಗದ ಕಾರ್ಯನಿರ್ವಹಣೆಯನ್ನು ಬಾಧಿಸುತ್ತಿದ್ದವು’ ಎಂದು ಜೋಸೆಫ್ ಆರೋಪಿಸಿದ್ದಾರೆ.</p>.<p class="title">ಆ ಬಾಹ್ಯಶಕ್ತಿಗಳು ಯಾವುವು ಎಂಬುದರ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಆದರೆ, ‘ದೀಪಕ್ ಮಿಶ್ರಾ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದ ನಾಲ್ವರು ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ನ ಉಳಿದ ನ್ಯಾಯಮೂರ್ತಿಗಳು ಈ ಬಾಹ್ಯ ಪ್ರಭಾವವನ್ನು ಗ್ರಹಿಸಿದ್ದರು’ ಎಂದಷ್ಟೇ ಅವರು ಹೇಳಿದ್ದಾರೆ.</p>.<p class="title">‘ಬಾಹ್ಯ ಶಕ್ತಿ ಎಂದರೆ ರಾಜಕೀಯ ಪಕ್ಷಗಳೇ’ ಎಂದು ಪತ್ರಕರ್ತರು ಅವರನ್ನು ಪ್ರಶ್ನಿಸಿದ್ದಾರೆ. ‘ಪ್ರಕರಣಗಳ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬುದಷ್ಟೇ ಇತರ ನ್ಯಾಯಮೂರ್ತಿಗಳ ಕಾಳಜಿಯ ವಿಷಯವಾಗಿತ್ತು. ಈ ಬಗ್ಗೆ ನಾನು ಇನ್ನೇನೂ ಹೇಳಲು ಬಯಸುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p class="title">‘ಪಕ್ಷಪಾತದ ಬಗ್ಗೆ ನಾವು ನಾಲ್ವರು ನ್ಯಾಯಮೂರ್ತಿಗಳೂ ದೀಪಕ್ ಮಿಶ್ರಾ ಅವರ ಜತೆ ಚರ್ಚಿಸಿದ್ದೆವು. ಲಿಖಿತ ಮನವಿಯನ್ನೂ ಮಾಡಿದ್ದೆವು. ಅವೆರಡೂ ಕೆಲಸ ಮಾಡಲಿಲ್ಲ. ಹೀಗಾಗಿ ಪತ್ರಿಕಾಗೋಷ್ಠಿ ನಡೆಸಬೇಕಾಯಿತು. ಪತ್ರಿಕಾಗೋಷ್ಠಿಯ ನಂತರ ತುಸು ಬದಲಾವಣೆ ಆಯಿತು’ ಎಂದು ಅವರು ವಿವರಿಸಿದ್ದಾರೆ.</p>.<p><strong>‘ನ್ಯಾಯಾಂಗ ತನಿಖೆಯಾಗಲಿ’</strong></p>.<p>ದೀಪಕ್ ಮಿಶ್ರಾ ಅವರು ಬಾಹ್ಯ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಲೇ ಇತ್ತು. ಮಿಶ್ರಾ ಅವರ ಜತೆ ಕೆಲಸ ಮಾಡಿದ್ದ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು ಈ ಅನುಮಾನ ನಿಜ ಎಂಬುದನ್ನು ಈಗ ದೃಢಪಡಿಸಿದ್ದಾರೆ. ನ್ಯಾಯಾಂಗವನ್ನು ಪ್ರಭಾವಿಸುತ್ತಿದ್ದ ಬಾಹ್ಯ ಶಕ್ತಿ ಯಾವುದು ಎಂಬುದನ್ನು ಪತ್ತೆ ಮಾಡಲು ಸಂಸದೀಯ ಸಮಿತಿ ತನಿಖೆ ಮತ್ತು ನ್ಯಾಯಾಂಗ ತನಿಖೆಗಳನ್ನು ಪ್ರತ್ಯೇಕವಾಗಿ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.<br />**</p>.<p>ಕೇಂದ್ರ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಕೈಗೊಂಬೆಯಂತೆ ಆಡಿಸುತ್ತಿತ್ತು ಎಂಬುದು ಈಗ ಸ್ಪಷ್ಟವಾಗಿದೆ<br />–<em><strong>ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ವಕ್ತಾರ</strong></em></p>.<p>**</p>.<p>ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಸಾವಿನ ಪ್ರಕರಣವಷ್ಟೇ ನಮ್ಮ ಮಾಧ್ಯಮಗೋಷ್ಠಿಗೆ ಕಾರಣವಾಗಿರಲಿಲ್ಲ. ಅದಕ್ಕೂ ಮೊದಲು ನಾವು ಮಾಡಿದ್ದ ಮನವಿಗಳನ್ನು ಮಿಶ್ರಾ ಕಡೆಗಣಿಸಿದ್ದರು<br /><em><strong>– ಕುರಿಯನ್ ಜೋಸೆಫ್, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>‘ಸುಪ್ರೀಂ ಕೋರ್ಟ್ನ ಹಿಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಬಾಹ್ಯ ಶಕ್ತಿಗಳ ಪ್ರಭಾವದಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಆರೋಪಿಸಿದ್ದಾರೆ.</p>.<p class="title">ಪ್ರಕರಣಗಳ ಹಂಚಿಕೆಯಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪಕ್ಷಪಾತ ಮಾಡುತ್ತಿದ್ದಾರೆ ಎಂದು2018ರ ಜನವರಿ 18ರಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದ ಸುಪ್ರೀಂ ಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳಲ್ಲಿ ಜೋಸೆಫ್ ಸಹ ಒಬ್ಬರು. ಅವರು ನವೆಂಬರ್ 29ರಂದಷ್ಟೇ ಸೇವೆಯಿಂದ ನಿವೃತ್ತರಾಗಿದ್ದಾರೆ.</p>.<p class="title">‘ಕೆಲವು ಬಾಹ್ಯ ಶಕ್ತಿಗಳು ದೀಪಕ್ ಮಿಶ್ರಾ ಅವರನ್ನು ರಿಮೋಟ್ನಂತೆ ನಿಯಂತ್ರಿಸುತ್ತಿದ್ದವು. ಆ ಶಕ್ತಿಗಳ ಪ್ರಭಾವವು ನ್ಯಾಯಾಂಗದ ಕಾರ್ಯನಿರ್ವಹಣೆಯನ್ನು ಬಾಧಿಸುತ್ತಿದ್ದವು’ ಎಂದು ಜೋಸೆಫ್ ಆರೋಪಿಸಿದ್ದಾರೆ.</p>.<p class="title">ಆ ಬಾಹ್ಯಶಕ್ತಿಗಳು ಯಾವುವು ಎಂಬುದರ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಆದರೆ, ‘ದೀಪಕ್ ಮಿಶ್ರಾ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದ ನಾಲ್ವರು ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ನ ಉಳಿದ ನ್ಯಾಯಮೂರ್ತಿಗಳು ಈ ಬಾಹ್ಯ ಪ್ರಭಾವವನ್ನು ಗ್ರಹಿಸಿದ್ದರು’ ಎಂದಷ್ಟೇ ಅವರು ಹೇಳಿದ್ದಾರೆ.</p>.<p class="title">‘ಬಾಹ್ಯ ಶಕ್ತಿ ಎಂದರೆ ರಾಜಕೀಯ ಪಕ್ಷಗಳೇ’ ಎಂದು ಪತ್ರಕರ್ತರು ಅವರನ್ನು ಪ್ರಶ್ನಿಸಿದ್ದಾರೆ. ‘ಪ್ರಕರಣಗಳ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬುದಷ್ಟೇ ಇತರ ನ್ಯಾಯಮೂರ್ತಿಗಳ ಕಾಳಜಿಯ ವಿಷಯವಾಗಿತ್ತು. ಈ ಬಗ್ಗೆ ನಾನು ಇನ್ನೇನೂ ಹೇಳಲು ಬಯಸುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p class="title">‘ಪಕ್ಷಪಾತದ ಬಗ್ಗೆ ನಾವು ನಾಲ್ವರು ನ್ಯಾಯಮೂರ್ತಿಗಳೂ ದೀಪಕ್ ಮಿಶ್ರಾ ಅವರ ಜತೆ ಚರ್ಚಿಸಿದ್ದೆವು. ಲಿಖಿತ ಮನವಿಯನ್ನೂ ಮಾಡಿದ್ದೆವು. ಅವೆರಡೂ ಕೆಲಸ ಮಾಡಲಿಲ್ಲ. ಹೀಗಾಗಿ ಪತ್ರಿಕಾಗೋಷ್ಠಿ ನಡೆಸಬೇಕಾಯಿತು. ಪತ್ರಿಕಾಗೋಷ್ಠಿಯ ನಂತರ ತುಸು ಬದಲಾವಣೆ ಆಯಿತು’ ಎಂದು ಅವರು ವಿವರಿಸಿದ್ದಾರೆ.</p>.<p><strong>‘ನ್ಯಾಯಾಂಗ ತನಿಖೆಯಾಗಲಿ’</strong></p>.<p>ದೀಪಕ್ ಮಿಶ್ರಾ ಅವರು ಬಾಹ್ಯ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಲೇ ಇತ್ತು. ಮಿಶ್ರಾ ಅವರ ಜತೆ ಕೆಲಸ ಮಾಡಿದ್ದ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು ಈ ಅನುಮಾನ ನಿಜ ಎಂಬುದನ್ನು ಈಗ ದೃಢಪಡಿಸಿದ್ದಾರೆ. ನ್ಯಾಯಾಂಗವನ್ನು ಪ್ರಭಾವಿಸುತ್ತಿದ್ದ ಬಾಹ್ಯ ಶಕ್ತಿ ಯಾವುದು ಎಂಬುದನ್ನು ಪತ್ತೆ ಮಾಡಲು ಸಂಸದೀಯ ಸಮಿತಿ ತನಿಖೆ ಮತ್ತು ನ್ಯಾಯಾಂಗ ತನಿಖೆಗಳನ್ನು ಪ್ರತ್ಯೇಕವಾಗಿ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.<br />**</p>.<p>ಕೇಂದ್ರ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಕೈಗೊಂಬೆಯಂತೆ ಆಡಿಸುತ್ತಿತ್ತು ಎಂಬುದು ಈಗ ಸ್ಪಷ್ಟವಾಗಿದೆ<br />–<em><strong>ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ವಕ್ತಾರ</strong></em></p>.<p>**</p>.<p>ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಸಾವಿನ ಪ್ರಕರಣವಷ್ಟೇ ನಮ್ಮ ಮಾಧ್ಯಮಗೋಷ್ಠಿಗೆ ಕಾರಣವಾಗಿರಲಿಲ್ಲ. ಅದಕ್ಕೂ ಮೊದಲು ನಾವು ಮಾಡಿದ್ದ ಮನವಿಗಳನ್ನು ಮಿಶ್ರಾ ಕಡೆಗಣಿಸಿದ್ದರು<br /><em><strong>– ಕುರಿಯನ್ ಜೋಸೆಫ್, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>