<p><strong>ರಾಂಚಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾಮೀನು ಕೋರಿ ಸೋಮವಾರ ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p> <p>ಅರ್ಜಿಯನ್ನು ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರ ಪೀಠದ ಮುಂದೆ ಮಂಗಳವಾರ(ಇಂದು) ವಿಚಾರಣೆಗೆ ನಿಗದಿ ಮಾಡಲಾಗಿದೆ.</p>.ಇಡಿ ಬಂಧನ: ಹೇಮಂತ್ ಸೊರೇನ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಜಾರ್ಖಂಡ್ HC. <p>ಬಾರ್ಗೇನ್ ಸರ್ಕಲ್ನಲ್ಲಿರುವ 8.5 ಎಕರೆ ಜಮೀನಿನ ಯಾವುದೇ ದಾಖಲೆಗಳಲ್ಲಿ ತನ್ನ ಹೆಸರಿಲ್ಲ. ಜಮೀನು ತನಗೆ ಸೇರಿದ್ದು ಎಂದು ಹೇಳಿರುವ ಕೆಲವರ ಹೇಳಿಕೆಗಳನ್ನು ಮಾತ್ರ ಇ.ಡಿ ಪರಿಗಣಿಸಿದೆ. ಆದರೆ ಅಂತಹ ಹೇಳಿಕೆಗಳನ್ನು ಪುಷ್ಟೀಕರಿಸಲು ಯಾವುದೇ ದಾಖಲೆಗಳಿಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p> <p>ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಹೇಮಂತ್ ಅವರನ್ನು ಜನವರಿ 31ರಂದು ಬಂಧಿಸಿತ್ತು. ಅದಕ್ಕೂ ಮುನ್ನ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. </p> <p>ಸದ್ಯ ಅವರು ರಾಂಚಿಯ ಹೊತ್ವಾರ್ನಲ್ಲಿರುವ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ.</p> .ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್ ಬಂಧನದ ಅವಧಿ ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾಮೀನು ಕೋರಿ ಸೋಮವಾರ ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p> <p>ಅರ್ಜಿಯನ್ನು ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರ ಪೀಠದ ಮುಂದೆ ಮಂಗಳವಾರ(ಇಂದು) ವಿಚಾರಣೆಗೆ ನಿಗದಿ ಮಾಡಲಾಗಿದೆ.</p>.ಇಡಿ ಬಂಧನ: ಹೇಮಂತ್ ಸೊರೇನ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಜಾರ್ಖಂಡ್ HC. <p>ಬಾರ್ಗೇನ್ ಸರ್ಕಲ್ನಲ್ಲಿರುವ 8.5 ಎಕರೆ ಜಮೀನಿನ ಯಾವುದೇ ದಾಖಲೆಗಳಲ್ಲಿ ತನ್ನ ಹೆಸರಿಲ್ಲ. ಜಮೀನು ತನಗೆ ಸೇರಿದ್ದು ಎಂದು ಹೇಳಿರುವ ಕೆಲವರ ಹೇಳಿಕೆಗಳನ್ನು ಮಾತ್ರ ಇ.ಡಿ ಪರಿಗಣಿಸಿದೆ. ಆದರೆ ಅಂತಹ ಹೇಳಿಕೆಗಳನ್ನು ಪುಷ್ಟೀಕರಿಸಲು ಯಾವುದೇ ದಾಖಲೆಗಳಿಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p> <p>ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಹೇಮಂತ್ ಅವರನ್ನು ಜನವರಿ 31ರಂದು ಬಂಧಿಸಿತ್ತು. ಅದಕ್ಕೂ ಮುನ್ನ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. </p> <p>ಸದ್ಯ ಅವರು ರಾಂಚಿಯ ಹೊತ್ವಾರ್ನಲ್ಲಿರುವ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ.</p> .ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್ ಬಂಧನದ ಅವಧಿ ವಿಸ್ತರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>