<p><strong>ಭೋಪಾಲ್(ಪಿಟಿಐ):</strong> ‘ಭಾರಿ ಮತಗಳಿಂದ ಗೆಲುವು ಸಾಧಿಸಿರುವ ನನ್ನ ತಂದೆಗೆ ಇಡೀ ದೆಹಲಿಯೇ ತಲೆಬಾಗುತ್ತದೆ. ದೆಹಲಿ ಅವರನ್ನು ಗುರುತಿಸುತ್ತದೆ, ಅವರನ್ನು ಗೌರವಿಸುತ್ತದೆ’ ಎಂಬ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರ ಪುತ್ರನ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.</p>.<p>ಮಧ್ಯಪ್ರದೇಶದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದೆ.</p>.<p>ಚೌಹಾಣ್ ಪುತ್ರ ಕಾರ್ತಿಕೇಯ ಸಿಂಗ್ ಅವರು ಸೆಹೋರ್ ಜಿಲ್ಲೆಯ ಬುಧ್ನಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೇರುಂಡಾ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ನೀಡಿರುವ ಹೇಳಿಕೆ, ಈಗ ಟೀಕೆಗೆ ಗುರಿಯಾಗಿದೆ.</p>.<p>‘ಈಗಷ್ಟೆ ನಾನು ದೆಹಲಿಯಿಂದ ಮರಳಿದ್ದೇನೆ. ನಮ್ಮ ತಂದೆ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಯಲ್ಲಿ ಜನಪ್ರಿಯರಾಗಿದ್ದರು. ಈಗ ಮುಖ್ಯಮಂತ್ರಿ ಅಲ್ಲ. ಆದರೂ, ಅವರು ಹೆಚ್ಚು ಜನಪ್ರಿಯರಾಗಿರುವುದು ಏಕೆ ಎಂದು ನನಗೆ ತಿಳಿಯುತ್ತಿಲ್ಲ’ ಎಂದು ಕಾರ್ತಿಕೇಯ ಸಿಂಗ್ ಹೇಳಿದ್ದಾರೆ.</p>.<p>‘ದೆಹಲಿಯಲ್ಲಿ ಮಾತ್ರವಲ್ಲ, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಉನ್ನತ ನಾಯಕರನ್ನು ಗಣನೆಗೆ ತೆಗೆದುಕೊಂಡಲ್ಲಿ, ನಮ್ಮ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಾರೆ’ ಎಂದೂ ಹೇಳಿದ್ದಾರೆ. ಕಾರ್ತಿಕೇಯ ಸಿಂಗ್ ಅವರು ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ.</p>.<p>ಈ ವಿಚಾರ ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟವಾರಿ ಅವರು ಬಿಜೆಪಿ ವಿರುದ್ಧ ಟೀಕೆ ಮಾಡಿದ್ದಾರೆ.</p>.<p>‘ದೆಹಲಿ ನಾಯಕರು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹೆದರುತ್ತಾರೆ ಎಂದು ಇದರರ್ಥ. ಇದು ಪಕ್ಷದಲ್ಲಿನ ಭಿನ್ನಮತ ಕುರಿತ ಭಯವನ್ನು ತೋರಿಸುತ್ತದೆ’ ಎಂದು ಪಟವಾರಿ ಕುಟುಕಿದ್ದಾರೆ.</p>.<p>‘ಶಿವರಾಜ್ ಸಿಂಗ್ ಅವರ ಯುವರಾಜ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ಭಯದಲ್ಲಿರುವ ಸರ್ವಾಧಿಕಾರಿಯನ್ನು ಇಡೀ ದೇಶವೇ ಗಮನಿಸುತ್ತಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್(ಪಿಟಿಐ):</strong> ‘ಭಾರಿ ಮತಗಳಿಂದ ಗೆಲುವು ಸಾಧಿಸಿರುವ ನನ್ನ ತಂದೆಗೆ ಇಡೀ ದೆಹಲಿಯೇ ತಲೆಬಾಗುತ್ತದೆ. ದೆಹಲಿ ಅವರನ್ನು ಗುರುತಿಸುತ್ತದೆ, ಅವರನ್ನು ಗೌರವಿಸುತ್ತದೆ’ ಎಂಬ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರ ಪುತ್ರನ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.</p>.<p>ಮಧ್ಯಪ್ರದೇಶದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದೆ.</p>.<p>ಚೌಹಾಣ್ ಪುತ್ರ ಕಾರ್ತಿಕೇಯ ಸಿಂಗ್ ಅವರು ಸೆಹೋರ್ ಜಿಲ್ಲೆಯ ಬುಧ್ನಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೇರುಂಡಾ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ನೀಡಿರುವ ಹೇಳಿಕೆ, ಈಗ ಟೀಕೆಗೆ ಗುರಿಯಾಗಿದೆ.</p>.<p>‘ಈಗಷ್ಟೆ ನಾನು ದೆಹಲಿಯಿಂದ ಮರಳಿದ್ದೇನೆ. ನಮ್ಮ ತಂದೆ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಯಲ್ಲಿ ಜನಪ್ರಿಯರಾಗಿದ್ದರು. ಈಗ ಮುಖ್ಯಮಂತ್ರಿ ಅಲ್ಲ. ಆದರೂ, ಅವರು ಹೆಚ್ಚು ಜನಪ್ರಿಯರಾಗಿರುವುದು ಏಕೆ ಎಂದು ನನಗೆ ತಿಳಿಯುತ್ತಿಲ್ಲ’ ಎಂದು ಕಾರ್ತಿಕೇಯ ಸಿಂಗ್ ಹೇಳಿದ್ದಾರೆ.</p>.<p>‘ದೆಹಲಿಯಲ್ಲಿ ಮಾತ್ರವಲ್ಲ, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಉನ್ನತ ನಾಯಕರನ್ನು ಗಣನೆಗೆ ತೆಗೆದುಕೊಂಡಲ್ಲಿ, ನಮ್ಮ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಾರೆ’ ಎಂದೂ ಹೇಳಿದ್ದಾರೆ. ಕಾರ್ತಿಕೇಯ ಸಿಂಗ್ ಅವರು ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ.</p>.<p>ಈ ವಿಚಾರ ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟವಾರಿ ಅವರು ಬಿಜೆಪಿ ವಿರುದ್ಧ ಟೀಕೆ ಮಾಡಿದ್ದಾರೆ.</p>.<p>‘ದೆಹಲಿ ನಾಯಕರು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹೆದರುತ್ತಾರೆ ಎಂದು ಇದರರ್ಥ. ಇದು ಪಕ್ಷದಲ್ಲಿನ ಭಿನ್ನಮತ ಕುರಿತ ಭಯವನ್ನು ತೋರಿಸುತ್ತದೆ’ ಎಂದು ಪಟವಾರಿ ಕುಟುಕಿದ್ದಾರೆ.</p>.<p>‘ಶಿವರಾಜ್ ಸಿಂಗ್ ಅವರ ಯುವರಾಜ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ಭಯದಲ್ಲಿರುವ ಸರ್ವಾಧಿಕಾರಿಯನ್ನು ಇಡೀ ದೇಶವೇ ಗಮನಿಸುತ್ತಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>