<p class="title"><strong>ಮುಂಬೈ:</strong> ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕಗಳಿದ್ದ ವಾಹನ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ಆರೋಪದಡಿ ಎನ್ಐಎ ಅಧಿಕಾರಿಗಳು ಗುರುವಾರ ಮಾಜಿ ಪೊಲೀಸ್ ಅಧಿಕಾರಿ, ‘ಎನ್ಕೌಂಟರ್ ಪರಿಣತ’ರಾಗಿದ್ದ ಪ್ರದೀಪ್ ಶರ್ಮಾ ಅವರನ್ನು ಬಂಧಿಸಿದ್ದಾರೆ.</p>.<p class="title">ಬುಧವಾರ ರಾತ್ರಿ ಲೋನವಾಲಾದಲ್ಲಿ ಶರ್ಮಾ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಎನ್ಐಎ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದರು. ಜೆ.ಬಿ.ನಗರದಲ್ಲಿ ಶರ್ಮಾ ನಿವಾಸದ ಮೇಲೂ ದಾಳಿ ನಡೆಸಿದ್ದರು.</p>.<p class="title">ಗುರುವಾರ ಅವರನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರಕರಣದಲ್ಲಿ ಅವರ ಪಾತ್ರವಿದೆ ಎಂಬ ಗುಮಾನಿಯು ವ್ಯಕ್ತವಾದ ನಂತರ ಎರಡು ತಿಂಗಳ ಹಿಂದೆಯೂ ಶರ್ಮಾ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.</p>.<p>ಎನ್ಐಎ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಂಬಂಧ ಒಟ್ಟು ಎಂಟು ಜನರನ್ನು ಬಂಧಿಸಿದ್ದು, ಇವರಲ್ಲಿ ಐವರು ಪೊಲೀಸ್ ಇಲಾಖೆಯವರೇ ಆಗಿದ್ದಾರೆ. ಈಗಾಗಲೇ ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಜೆ, ರಿಯಾಜುದ್ದೀನ್ ಕಾಜಿ, ಸುನಿಲ್ ಮಾನೆ, ಪೊಲೀಸ್ ಕಾನ್ಸ್ಟೆಬಲ್ ವಿನಾಯಕ ಶಿಂಧೆ ಅವರನ್ನು ಬಂಧಿಸಲಾಗಿತ್ತು.</p>.<p>ಉಳಿದಂತೆ, ಸ್ಪೋಟಕಗಳಿದ್ದ ವಾಹನವನ್ನು ಅಂಬಾನಿ ನಿವಾಸದ ಸಮೀಪ ಫೆ. 25ರಂದು ನಿಲ್ಲಿಸಲಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಮಲಾಡ್ ನಿವಾಸಿಗಳಾದ ಸಂತೋಷ್ ಶೆಲರ್ ಮತ್ತು ಆನಂದ್ ಜಾಧವ್ ಅವರನ್ನು ಬಂಧಿಸಲಾಗಿತ್ತು.</p>.<p>ಈ ವಾಹನದ ಮಾಲೀಕತ್ವವನ್ನು ಹೊಂದಿದ್ದರು ಎನ್ನಲಾದ ಪುಣೆಯ ಉದ್ಯಮಿ ಮನ್ಸುಖ್ ಹಿರೇನ್ ಅವರು ಶಂಕಾಸ್ಪದ ರೀತಿಯಲ್ಲಿ ಮಾರ್ಚ್ 5ರಂದು ಸತ್ತಿದ್ದು, ಚರಂಡಿಯೊಂದರಲ್ಲಿ ಅವರ ಶವ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕಗಳಿದ್ದ ವಾಹನ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ಆರೋಪದಡಿ ಎನ್ಐಎ ಅಧಿಕಾರಿಗಳು ಗುರುವಾರ ಮಾಜಿ ಪೊಲೀಸ್ ಅಧಿಕಾರಿ, ‘ಎನ್ಕೌಂಟರ್ ಪರಿಣತ’ರಾಗಿದ್ದ ಪ್ರದೀಪ್ ಶರ್ಮಾ ಅವರನ್ನು ಬಂಧಿಸಿದ್ದಾರೆ.</p>.<p class="title">ಬುಧವಾರ ರಾತ್ರಿ ಲೋನವಾಲಾದಲ್ಲಿ ಶರ್ಮಾ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಎನ್ಐಎ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದರು. ಜೆ.ಬಿ.ನಗರದಲ್ಲಿ ಶರ್ಮಾ ನಿವಾಸದ ಮೇಲೂ ದಾಳಿ ನಡೆಸಿದ್ದರು.</p>.<p class="title">ಗುರುವಾರ ಅವರನ್ನು ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರಕರಣದಲ್ಲಿ ಅವರ ಪಾತ್ರವಿದೆ ಎಂಬ ಗುಮಾನಿಯು ವ್ಯಕ್ತವಾದ ನಂತರ ಎರಡು ತಿಂಗಳ ಹಿಂದೆಯೂ ಶರ್ಮಾ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.</p>.<p>ಎನ್ಐಎ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಂಬಂಧ ಒಟ್ಟು ಎಂಟು ಜನರನ್ನು ಬಂಧಿಸಿದ್ದು, ಇವರಲ್ಲಿ ಐವರು ಪೊಲೀಸ್ ಇಲಾಖೆಯವರೇ ಆಗಿದ್ದಾರೆ. ಈಗಾಗಲೇ ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಜೆ, ರಿಯಾಜುದ್ದೀನ್ ಕಾಜಿ, ಸುನಿಲ್ ಮಾನೆ, ಪೊಲೀಸ್ ಕಾನ್ಸ್ಟೆಬಲ್ ವಿನಾಯಕ ಶಿಂಧೆ ಅವರನ್ನು ಬಂಧಿಸಲಾಗಿತ್ತು.</p>.<p>ಉಳಿದಂತೆ, ಸ್ಪೋಟಕಗಳಿದ್ದ ವಾಹನವನ್ನು ಅಂಬಾನಿ ನಿವಾಸದ ಸಮೀಪ ಫೆ. 25ರಂದು ನಿಲ್ಲಿಸಲಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಮಲಾಡ್ ನಿವಾಸಿಗಳಾದ ಸಂತೋಷ್ ಶೆಲರ್ ಮತ್ತು ಆನಂದ್ ಜಾಧವ್ ಅವರನ್ನು ಬಂಧಿಸಲಾಗಿತ್ತು.</p>.<p>ಈ ವಾಹನದ ಮಾಲೀಕತ್ವವನ್ನು ಹೊಂದಿದ್ದರು ಎನ್ನಲಾದ ಪುಣೆಯ ಉದ್ಯಮಿ ಮನ್ಸುಖ್ ಹಿರೇನ್ ಅವರು ಶಂಕಾಸ್ಪದ ರೀತಿಯಲ್ಲಿ ಮಾರ್ಚ್ 5ರಂದು ಸತ್ತಿದ್ದು, ಚರಂಡಿಯೊಂದರಲ್ಲಿ ಅವರ ಶವ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>