ಈ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್.ಎ. ನಜೀರ್ ಮತ್ತು ವಿಕ್ರಂ ನಾಥ್ ಅವರು, ನಿವೃತ್ತಿಯಾದ ನೌಕರಿನಿಂದ ವಸೂಲಿ ಮಾಡಬಾರದು ಎಂದು ಹೇಳಿರುವುದಕ್ಕೆ ನೌಕರನ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ ಎಂದು ಭಾವಿಸಬೇಕಾಗಿಲ್ಲ. ಆದರೆ ಆತನಿಗೆ ಜೀವನ ನಡೆಸಲು ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.