<p><strong>ನವದೆಹಲಿ:</strong> ಜಾಮೀನು ಮಂಜೂರು ಮಾಡುವುದು ಹಾಗೂ ಅದಕ್ಕೆ ಸಂಬಂಧಿಸಿದಂತೆ ವಿಪರೀತವಾದ ಷರತ್ತುಗಳನ್ನು ವಿಧಿಸುವುದು ಬಲಗೈಯಲ್ಲಿ ಕೊಟ್ಟು, ಎಡಗೈಯಿಂದ ಹಿಂಪಡೆಯುವುದಕ್ಕೆ ಸಮ ಎಂದು ಸುಪ್ರೀಂ ಕೋರ್ಟ್ ಗುರುವಾರ ನೀಡಿರುವ ತೀರ್ಪೊಂದರಲ್ಲಿ ಹೇಳಿದೆ.</p>.<p>ಸಂವಿಧಾನದ 21ನೇ ವಿಧಿಯು ನೀಡಿರುವ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಹಾಗೂ ಸಂಬಂಧಪಟ್ಟ ವ್ಯಕ್ತಿಯ ಹಾಜರಿರುವಿಕೆಯನ್ನು ಖಾತರಿಪಡಿಸುವ ಜಾಮೀನು ಆದೇಶವು ಸೂಕ್ತವಾಗುತ್ತದೆ ಎಂದು ಹೇಳಿದೆ.</p>.<p>ವಂಚನೆ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ 13 ಪ್ರಕರಣಗಳು ದಾಖಲಾಗಿರುವ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇದ್ದ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.</p>.<p>ತಮಗೆ ಈ 13 ಪ್ರಕರಣಗಳಲ್ಲಿಯೂ ಜಾಮೀನು ದೊರೆತಿದೆ, ಎರಡು ಪ್ರಕರಣಗಳಿಗೆ ಸಂಬಂಧಿಸಿದ ಜಾಮೀನು ಷರತ್ತುಗಳನ್ನು ಪೂರೈಸಲಾಗಿದೆ ಎಂದು ಅರ್ಜಿದಾರರು ಹೇಳಿದ್ದರು. ಆದರೆ ಇನ್ನುಳಿದ 11 ಪ್ರಕರಣಗಳಿಗೆ ಪ್ರತ್ಯೇಕವಾದ ಶ್ಯೂರಿಟಿ ಒದಗಿಸುವುದಕ್ಕೆ ತಮ್ಮಿಂದ ಆಗುತ್ತಿಲ್ಲ ಎಂದು ಅರ್ಜಿದಾರ ಹೇಳಿದ್ದ ಮಾತನ್ನು ಪೀಠವು ದಾಖಲಿಸಿಕೊಂಡಿತ್ತು.</p>.<p>‘13 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ, ಅರ್ಜಿದಾರರಿಗೆ ಶ್ಯೂರಿಟಿ ಒದಗಿಸಲು ಆಗುತ್ತಿಲ್ಲ. ಅತಿಯಾದ ಷರತ್ತುಗಳನ್ನು ವಿಧಿಸುವುದರಿಂದ ಜಾಮೀನು ನಿರಾಕರಿಸಿದಂತಾಗುತ್ತದೆ ಎಂಬುದು ಹಿಂದಿನಿಂದಲೂ ಚಾಲ್ತಿಯಲ್ಲಿರುವ ತತ್ವ. ಅತಿಯಾದ ಷರತ್ತುಗಳು ಯಾವುವು ಎಂಬುದು ಪ್ರತಿ ಪ್ರಕರಣವನ್ನು ಆಧರಿಸಿರುತ್ತದೆ’ ಎಂದು ಹೇಳಿದೆ.</p>.<p>ರಾಜಸ್ಥಾನದಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಜಾಮೀನು ಆದೇಶದಲ್ಲಿ, ಸ್ಥಳೀಯ ವ್ಯಕ್ತಿಯೊಬ್ಬರನ್ನು ಶ್ಯೂರಿಟಿಯಾಗಿ ನೀಡುವಂತೆ ಸೂಚಿಸಲಾಗಿದೆ. ಆದರೆ ಆರೋಪಿಯು ಹರಿಯಾಣದವರು. ಸ್ಥಳೀಯ ವ್ಯಕ್ತಿಯನ್ನು ಶ್ಯೂರಿಟಿಯಾಗಿ ನೀಡುವುದು ಅವರಿಗೆ ಬಹಳ ಕಷ್ಟದ ಕೆಲಸ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾಮೀನು ಮಂಜೂರು ಮಾಡುವುದು ಹಾಗೂ ಅದಕ್ಕೆ ಸಂಬಂಧಿಸಿದಂತೆ ವಿಪರೀತವಾದ ಷರತ್ತುಗಳನ್ನು ವಿಧಿಸುವುದು ಬಲಗೈಯಲ್ಲಿ ಕೊಟ್ಟು, ಎಡಗೈಯಿಂದ ಹಿಂಪಡೆಯುವುದಕ್ಕೆ ಸಮ ಎಂದು ಸುಪ್ರೀಂ ಕೋರ್ಟ್ ಗುರುವಾರ ನೀಡಿರುವ ತೀರ್ಪೊಂದರಲ್ಲಿ ಹೇಳಿದೆ.</p>.<p>ಸಂವಿಧಾನದ 21ನೇ ವಿಧಿಯು ನೀಡಿರುವ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಹಾಗೂ ಸಂಬಂಧಪಟ್ಟ ವ್ಯಕ್ತಿಯ ಹಾಜರಿರುವಿಕೆಯನ್ನು ಖಾತರಿಪಡಿಸುವ ಜಾಮೀನು ಆದೇಶವು ಸೂಕ್ತವಾಗುತ್ತದೆ ಎಂದು ಹೇಳಿದೆ.</p>.<p>ವಂಚನೆ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ 13 ಪ್ರಕರಣಗಳು ದಾಖಲಾಗಿರುವ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇದ್ದ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.</p>.<p>ತಮಗೆ ಈ 13 ಪ್ರಕರಣಗಳಲ್ಲಿಯೂ ಜಾಮೀನು ದೊರೆತಿದೆ, ಎರಡು ಪ್ರಕರಣಗಳಿಗೆ ಸಂಬಂಧಿಸಿದ ಜಾಮೀನು ಷರತ್ತುಗಳನ್ನು ಪೂರೈಸಲಾಗಿದೆ ಎಂದು ಅರ್ಜಿದಾರರು ಹೇಳಿದ್ದರು. ಆದರೆ ಇನ್ನುಳಿದ 11 ಪ್ರಕರಣಗಳಿಗೆ ಪ್ರತ್ಯೇಕವಾದ ಶ್ಯೂರಿಟಿ ಒದಗಿಸುವುದಕ್ಕೆ ತಮ್ಮಿಂದ ಆಗುತ್ತಿಲ್ಲ ಎಂದು ಅರ್ಜಿದಾರ ಹೇಳಿದ್ದ ಮಾತನ್ನು ಪೀಠವು ದಾಖಲಿಸಿಕೊಂಡಿತ್ತು.</p>.<p>‘13 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ, ಅರ್ಜಿದಾರರಿಗೆ ಶ್ಯೂರಿಟಿ ಒದಗಿಸಲು ಆಗುತ್ತಿಲ್ಲ. ಅತಿಯಾದ ಷರತ್ತುಗಳನ್ನು ವಿಧಿಸುವುದರಿಂದ ಜಾಮೀನು ನಿರಾಕರಿಸಿದಂತಾಗುತ್ತದೆ ಎಂಬುದು ಹಿಂದಿನಿಂದಲೂ ಚಾಲ್ತಿಯಲ್ಲಿರುವ ತತ್ವ. ಅತಿಯಾದ ಷರತ್ತುಗಳು ಯಾವುವು ಎಂಬುದು ಪ್ರತಿ ಪ್ರಕರಣವನ್ನು ಆಧರಿಸಿರುತ್ತದೆ’ ಎಂದು ಹೇಳಿದೆ.</p>.<p>ರಾಜಸ್ಥಾನದಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಜಾಮೀನು ಆದೇಶದಲ್ಲಿ, ಸ್ಥಳೀಯ ವ್ಯಕ್ತಿಯೊಬ್ಬರನ್ನು ಶ್ಯೂರಿಟಿಯಾಗಿ ನೀಡುವಂತೆ ಸೂಚಿಸಲಾಗಿದೆ. ಆದರೆ ಆರೋಪಿಯು ಹರಿಯಾಣದವರು. ಸ್ಥಳೀಯ ವ್ಯಕ್ತಿಯನ್ನು ಶ್ಯೂರಿಟಿಯಾಗಿ ನೀಡುವುದು ಅವರಿಗೆ ಬಹಳ ಕಷ್ಟದ ಕೆಲಸ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>