ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ.
ವೈದ್ಯಕೀಯ ಚಿಕಿತ್ಸೆ ಪಡೆಯುವ ಸಲುವಾಗಿ ಜಾಮೀನು ನೀಡುವಂತೆ ಕೋರಿದ್ದ ಅರ್ಜಿಯನ್ನು ಪರಿಶೀಲಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಭವೇಜಾ ಅವರು ಕೇಜ್ರಿವಾಲ್ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜೈಲಿನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 19ರವರೆಗೆ ವಿಸ್ತರಿಸಿರುವ ನ್ಯಾಯಾಲಯ, ಮತ್ತೊಂದು ಜಾಮೀನು ಅರ್ಜಿಯನ್ನು ಜೂನ್ 7ರಂದು ವಿಚಾರನೆ ನಡೆಸುವುದಾಗಿ ತಿಳಿಸಿದೆ.