<p><strong>ನವದೆಹಲಿ</strong>: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಉದ್ಯಮಿ ಅಮನ್ದೀಪ್ ಸಿಂಗ್ ಡಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಕರಣದಲ್ಲಿ 300 ಸಾಕ್ಷಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಆದರೆ, ಅಮನ್ದೀಪ್ ವಿಚಾರಣೆ ಇನ್ನೂ ಆರಂಭಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿದೆ.</p><p>ಅಮನ್ದೀಪ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಪ್ರಕರಣದ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂದು ಪೀಠ ಹೇಳಿದೆ.</p><p>ವಿಚಾರಣಾ ನ್ಯಾಯಾಲಯದ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿ, ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರತಿ ವಿಚಾರಣೆ ಸಂದರ್ಭದಲ್ಲೂ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.</p><p>ಜೂನ್ ತಿಂಗಳಲ್ಲಿ ತಮಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಡಲ್, ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.</p><p>ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಡಲ್ ಅವರನ್ನು ಸಿಬಿಐ ಬಂಧಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಉದ್ಯಮಿ ಅಮನ್ದೀಪ್ ಸಿಂಗ್ ಡಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಕರಣದಲ್ಲಿ 300 ಸಾಕ್ಷಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಆದರೆ, ಅಮನ್ದೀಪ್ ವಿಚಾರಣೆ ಇನ್ನೂ ಆರಂಭಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿದೆ.</p><p>ಅಮನ್ದೀಪ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಪ್ರಕರಣದ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂದು ಪೀಠ ಹೇಳಿದೆ.</p><p>ವಿಚಾರಣಾ ನ್ಯಾಯಾಲಯದ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿ, ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರತಿ ವಿಚಾರಣೆ ಸಂದರ್ಭದಲ್ಲೂ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.</p><p>ಜೂನ್ ತಿಂಗಳಲ್ಲಿ ತಮಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಡಲ್, ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.</p><p>ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಡಲ್ ಅವರನ್ನು ಸಿಬಿಐ ಬಂಧಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>