<p><strong>ನವದೆಹಲಿ: </strong>ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ, ‘ಕೇಜ್ರಿವಾಲ್ ಅವರು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದೆ.</p>.<p>ಭಾನುವಾರ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ‘ಕೇಜ್ರಿವಾಲ್ ನಿರ್ದೇಶನದ ‘ಲೂಟೇರಾ’ (ಲೂಟಿಕೋರ) ಸಿನಿಮಾ ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಎಂಟು ವರ್ಷಗಳಿಂದಲೂ ಪ್ರದರ್ಶನ ಕಾಣುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>ರಣವೀರ್ ಸಿಂಗ್ ನಟನೆಯ ‘ಲೂಟೇರಾ’ ಸಿನಿಮಾವನ್ನು ಉಲ್ಲೇಖಿಸಿ ಪೋಸ್ಟರ್ವೊಂದನ್ನು ಸಿದ್ಧಪಡಿಸಿರುವ ಬಿಜೆಪಿಯು ಅದರಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ‘ಲೂಟಿಕೋರ’ನನ್ನಾಗಿ ಬಿಂಬಿಸಿದೆ. ಈ ಪೋಸ್ಟರ್ ಅನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.</p>.<p>‘ವಂಚಕ ಸುಕೇಶ್ ಚಂದ್ರಶೇಖರ್, ಬಿಜೆಪಿ ನಾಯಕರಂತೆಯೇ ಮಾತನಾಡುತ್ತಿದ್ದಾರೆ. ಹೀಗಾಗಿ ಅವರನ್ನು ಬಿಜೆಪಿಯು ತನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಿ’ ಎಂದು ಕೇಜ್ರಿವಾಲ್ ಕುಟುಕಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಪೂನಾವಾಲಾ ಅವರು, ‘ಕೇಜ್ರಿವಾಲ್ ಅಷ್ಟೊಂದು ಪ್ರಾಮಾಣಿಕ ವ್ಯಕ್ತಿಯಾಗಿದ್ದರೆ, ಸಚಿವರಾದ ಸತ್ಯೇಂದರ್ ಜೈನ್ ಹಾಗೂ ಕೈಲಾಶ್ ಗಹಲೋತ್ ಅವರೊಂದಿಗೆ ಸುಳ್ಳು ಪತ್ತೆ ಪರೀಕ್ಷೆ ಎದುರಿಸಲಿ. ಆ ಮೂಲಕ ಸುಕೇಶ್ ಮಾಡಿರುವ ಆರೋಪಗಳೆಲ್ಲಾ ಸುಳ್ಳು ಎಂದು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ, ‘ಕೇಜ್ರಿವಾಲ್ ಅವರು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದೆ.</p>.<p>ಭಾನುವಾರ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ‘ಕೇಜ್ರಿವಾಲ್ ನಿರ್ದೇಶನದ ‘ಲೂಟೇರಾ’ (ಲೂಟಿಕೋರ) ಸಿನಿಮಾ ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಎಂಟು ವರ್ಷಗಳಿಂದಲೂ ಪ್ರದರ್ಶನ ಕಾಣುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>ರಣವೀರ್ ಸಿಂಗ್ ನಟನೆಯ ‘ಲೂಟೇರಾ’ ಸಿನಿಮಾವನ್ನು ಉಲ್ಲೇಖಿಸಿ ಪೋಸ್ಟರ್ವೊಂದನ್ನು ಸಿದ್ಧಪಡಿಸಿರುವ ಬಿಜೆಪಿಯು ಅದರಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ‘ಲೂಟಿಕೋರ’ನನ್ನಾಗಿ ಬಿಂಬಿಸಿದೆ. ಈ ಪೋಸ್ಟರ್ ಅನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.</p>.<p>‘ವಂಚಕ ಸುಕೇಶ್ ಚಂದ್ರಶೇಖರ್, ಬಿಜೆಪಿ ನಾಯಕರಂತೆಯೇ ಮಾತನಾಡುತ್ತಿದ್ದಾರೆ. ಹೀಗಾಗಿ ಅವರನ್ನು ಬಿಜೆಪಿಯು ತನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಿ’ ಎಂದು ಕೇಜ್ರಿವಾಲ್ ಕುಟುಕಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಪೂನಾವಾಲಾ ಅವರು, ‘ಕೇಜ್ರಿವಾಲ್ ಅಷ್ಟೊಂದು ಪ್ರಾಮಾಣಿಕ ವ್ಯಕ್ತಿಯಾಗಿದ್ದರೆ, ಸಚಿವರಾದ ಸತ್ಯೇಂದರ್ ಜೈನ್ ಹಾಗೂ ಕೈಲಾಶ್ ಗಹಲೋತ್ ಅವರೊಂದಿಗೆ ಸುಳ್ಳು ಪತ್ತೆ ಪರೀಕ್ಷೆ ಎದುರಿಸಲಿ. ಆ ಮೂಲಕ ಸುಕೇಶ್ ಮಾಡಿರುವ ಆರೋಪಗಳೆಲ್ಲಾ ಸುಳ್ಳು ಎಂದು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>