<p><strong>ನವದೆಹಲಿ</strong>: ತಿಹಾರ ಜೈಲಿನಲ್ಲಿಯೇ ತಮ್ಮನ್ನು ವಿಚಾರಣೆಗೆ ಒಳಪಡಿಸುವುದಾಗಿ ಸಿಬಿಐ ಸಲ್ಲಿಸಿರುವ ಅರ್ಜಿ ವಿರೋಧಿಸಿ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರು ಶನಿವಾರ ದೆಹಲಿಯ ನ್ಯಾಯಾಲಯವೊಂದರ ಮೆಟ್ಟಿಲೇರಿದ್ದಾರೆ.</p>.<p>ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕವಿತಾ ಅವರು ಈಗ ತಿಹಾರ ಜೈಲಿನಲ್ಲಿದ್ದಾರೆ.</p>.<p>ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು. ಅದರಂತೆ, ತಿಹಾರ ಜೈಲಿನಲ್ಲಿಯೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯವು ಸಿಬಿಐಗೆ ಶುಕ್ರವಾರ ಅನುಮತಿ ನೀಡಿತ್ತು.</p>.<p>ಕವಿತಾ ಅವರ ಬೆನ್ನಹಿಂದೆ ಅರ್ಜಿ ಸಲ್ಲಿಸುವ ಮೂಲಕ ಸಿಬಿಐ ಕಾನೂನು ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ನ್ಯಾಯಾಲಯದಲ್ಲಿ ಹಾಜರಿದ್ದ ಕವಿತಾ ಪರ ವಕೀಲರು ಹೇಳಿದರು. ಜೊತೆಗೆ, ಕವಿತಾ ಅವರ ಅರ್ಜಿ ವಿಚಾರಣೆ ನಡೆಯುವವರೆಗೆ ಸಿಬಿಐನ ಅರ್ಜಿಗೆ ಸಂಬಂಧಿಸಿ ಆದೇಶ ನೀಡದಂತೆ ಮನವಿ ಮಾಡಿದರು.</p>.<p>ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮುಂದಿನ ಶನಿವಾರ ನಡೆಸುವ ಸಾಧ್ಯತೆ ಇದೆ.</p>.<p>ಮಾರ್ಚ್ 15ರಂದು ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಿಹಾರ ಜೈಲಿನಲ್ಲಿಯೇ ತಮ್ಮನ್ನು ವಿಚಾರಣೆಗೆ ಒಳಪಡಿಸುವುದಾಗಿ ಸಿಬಿಐ ಸಲ್ಲಿಸಿರುವ ಅರ್ಜಿ ವಿರೋಧಿಸಿ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರು ಶನಿವಾರ ದೆಹಲಿಯ ನ್ಯಾಯಾಲಯವೊಂದರ ಮೆಟ್ಟಿಲೇರಿದ್ದಾರೆ.</p>.<p>ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕವಿತಾ ಅವರು ಈಗ ತಿಹಾರ ಜೈಲಿನಲ್ಲಿದ್ದಾರೆ.</p>.<p>ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು. ಅದರಂತೆ, ತಿಹಾರ ಜೈಲಿನಲ್ಲಿಯೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯವು ಸಿಬಿಐಗೆ ಶುಕ್ರವಾರ ಅನುಮತಿ ನೀಡಿತ್ತು.</p>.<p>ಕವಿತಾ ಅವರ ಬೆನ್ನಹಿಂದೆ ಅರ್ಜಿ ಸಲ್ಲಿಸುವ ಮೂಲಕ ಸಿಬಿಐ ಕಾನೂನು ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ನ್ಯಾಯಾಲಯದಲ್ಲಿ ಹಾಜರಿದ್ದ ಕವಿತಾ ಪರ ವಕೀಲರು ಹೇಳಿದರು. ಜೊತೆಗೆ, ಕವಿತಾ ಅವರ ಅರ್ಜಿ ವಿಚಾರಣೆ ನಡೆಯುವವರೆಗೆ ಸಿಬಿಐನ ಅರ್ಜಿಗೆ ಸಂಬಂಧಿಸಿ ಆದೇಶ ನೀಡದಂತೆ ಮನವಿ ಮಾಡಿದರು.</p>.<p>ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮುಂದಿನ ಶನಿವಾರ ನಡೆಸುವ ಸಾಧ್ಯತೆ ಇದೆ.</p>.<p>ಮಾರ್ಚ್ 15ರಂದು ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>