<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 21 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ ಎ’ದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ಅಬಕಾರಿ ಹಗರಣ: ಕೇಜ್ರಿವಾಲ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಲಿರುವ ಸಿಬಿಐ.<p>ದೋಷಾರೋಪ ನಿಗದಿ ವೇಳೆ ಹಲವು ವಿಷಯಗಳನ್ನು ವಿಶೇಷ ನ್ಯಾಯಾಲಯ ಒಂದೋ ನಿರ್ಲಕ್ಷಿಸಿದೆ ಅಥವಾ ಪರಿಗಣಿಸಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿ 21 ಮಂದಿ ವಿರುದ್ಧ ಸಿಐಡಿ ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ತಿರಸ್ಕರಿಸಿದ ನ್ಯಾಯಾಲಯ ಅವರೆಲ್ಲರನ್ನೂ ಖುಲಾಸೆಗೊಳಿಸಿದೆ.</p><p>ಖುಲಾಸೆಗೊಂಡವರಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಕೂಡ ಇದ್ದಾರೆ.</p>.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್–ಸಿಸೋಡಿಯಾ ಬಂಧನದಿಂದ ಖುಲಾಸೆವರೆಗೆ....<p>ಪ್ರಕರಣದಲ್ಲಿ ಸಿಬಿಐ ನಡೆಸಿದ ತನಿಖೆಯಲ್ಲಿ ಲೋಪಗಳಿವೆ. ಪ್ರಕರಣದಲ್ಲಿ ಕೇಜ್ರಿವಾಲ್ ಹಾಗೂ ಇತರರು ಭಾಗಿಯಾಗಿದ್ದಾರೆ ಎಂದು ಸಾಬೀತುಪಡಿಸುವ ಯಾವ ಅಂಶಗಳೂ ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದ್ದರು.</p> .ಮಾಧ್ಯಮದ ಎದುರು ಗಳಗಳನೆ ಅತ್ತ ಆರೋಪದಿಂದ ಮುಕ್ತ ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 21 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ ಎ’ದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ಅಬಕಾರಿ ಹಗರಣ: ಕೇಜ್ರಿವಾಲ್ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಲಿರುವ ಸಿಬಿಐ.<p>ದೋಷಾರೋಪ ನಿಗದಿ ವೇಳೆ ಹಲವು ವಿಷಯಗಳನ್ನು ವಿಶೇಷ ನ್ಯಾಯಾಲಯ ಒಂದೋ ನಿರ್ಲಕ್ಷಿಸಿದೆ ಅಥವಾ ಪರಿಗಣಿಸಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಸೇರಿ 21 ಮಂದಿ ವಿರುದ್ಧ ಸಿಐಡಿ ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ತಿರಸ್ಕರಿಸಿದ ನ್ಯಾಯಾಲಯ ಅವರೆಲ್ಲರನ್ನೂ ಖುಲಾಸೆಗೊಳಿಸಿದೆ.</p><p>ಖುಲಾಸೆಗೊಂಡವರಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಕೂಡ ಇದ್ದಾರೆ.</p>.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್–ಸಿಸೋಡಿಯಾ ಬಂಧನದಿಂದ ಖುಲಾಸೆವರೆಗೆ....<p>ಪ್ರಕರಣದಲ್ಲಿ ಸಿಬಿಐ ನಡೆಸಿದ ತನಿಖೆಯಲ್ಲಿ ಲೋಪಗಳಿವೆ. ಪ್ರಕರಣದಲ್ಲಿ ಕೇಜ್ರಿವಾಲ್ ಹಾಗೂ ಇತರರು ಭಾಗಿಯಾಗಿದ್ದಾರೆ ಎಂದು ಸಾಬೀತುಪಡಿಸುವ ಯಾವ ಅಂಶಗಳೂ ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದ್ದರು.</p> .ಮಾಧ್ಯಮದ ಎದುರು ಗಳಗಳನೆ ಅತ್ತ ಆರೋಪದಿಂದ ಮುಕ್ತ ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>