ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿಸಲಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಜಾಮೀನು ಕೋರಿ, ಶುಕ್ರವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
‘ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಈ ಅರ್ಜಿಯ ವಿಚಾರಣೆಯನ್ನು ಶನಿವಾರ ನಡೆಸಲಿದ್ದಾರೆ’ ಎಂದು ವಕೀಲ ರಿಷಿಕೇಶ್ ಹೇಳಿದರು.
ಸಿಸೋಡಿಯಾ ಅವರನ್ನು ಫೆಬ್ರುವರಿ 27ರಂದು (ಸೋಮವಾರ) ಐದು ದಿನಗಳ ವರೆಗೆ ಸಿಬಿಐ ವಶಕ್ಕೆ ನೀಡಲಾಗಿತ್ತು. ಈ ಅವಧಿಯು ಶನಿವಾರ ಅಂತ್ಯವಾಗಲಿದೆ. ಸಿಸೋಡಿಯಾ ಅವರನ್ನು ಅಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು.