<p><strong>ನವದೆಹಲಿ:</strong> ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದಲ್ಲಿ ತನಗೆ ವಹಿಸಿದ್ದ ಕಾರ್ಯಗಳನ್ನು ನಿಖರವಾಗಿ ಮತ್ತು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಭಾರತೀಯ ವಾಯುಪಡೆ ( ಐಎಎಫ್ ) ಭಾನುವಾರ ಹೇಳಿದೆ.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಐಎಎಫ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ನೀಡಲಾಗುವುದು. ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ ಎಂದೂ ಐಎಎಫ್ ಹೇಳಿದೆ.</p>.Operation Sindoor: ವಿವಿಧ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ಸಭೆ. <p>ಮೇ 10ರ ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ.</p>. <p>ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆಯಲ್ಲಿ ತನಗೆ ವಹಿಸಿದ ಕಾರ್ಯಗಳನ್ನು ನಿಖರ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಕಾರ್ಯಾಚರಣೆಗಳನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ, ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ನಡೆಸಲಾಗಿದೆ ಎಂದು ಐಎಎಫ್ ಹೇಳಿದೆ.</p>.ಪಹಲ್ಗಾಮ್ ದಾಳಿ ಮರೆಯಲಾಗದು..'ಆಪರೇಷನ್ ಸಿಂಧೂರ' ಶ್ಲಾಘನೀಯ: ಅಮಿತಾಬ್ ಬಚ್ಚನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದಲ್ಲಿ ತನಗೆ ವಹಿಸಿದ್ದ ಕಾರ್ಯಗಳನ್ನು ನಿಖರವಾಗಿ ಮತ್ತು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಭಾರತೀಯ ವಾಯುಪಡೆ ( ಐಎಎಫ್ ) ಭಾನುವಾರ ಹೇಳಿದೆ.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಐಎಎಫ್ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ನೀಡಲಾಗುವುದು. ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ ಎಂದೂ ಐಎಎಫ್ ಹೇಳಿದೆ.</p>.Operation Sindoor: ವಿವಿಧ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ಸಭೆ. <p>ಮೇ 10ರ ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ.</p>. <p>ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆಯಲ್ಲಿ ತನಗೆ ವಹಿಸಿದ ಕಾರ್ಯಗಳನ್ನು ನಿಖರ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಕಾರ್ಯಾಚರಣೆಗಳನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ, ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ನಡೆಸಲಾಗಿದೆ ಎಂದು ಐಎಎಫ್ ಹೇಳಿದೆ.</p>.ಪಹಲ್ಗಾಮ್ ದಾಳಿ ಮರೆಯಲಾಗದು..'ಆಪರೇಷನ್ ಸಿಂಧೂರ' ಶ್ಲಾಘನೀಯ: ಅಮಿತಾಬ್ ಬಚ್ಚನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>