<p><strong>ನವದೆಹಲಿ:</strong> ಕೇಂದ್ರದಲ್ಲಿ ಈಗ ಇರುವ ಸರ್ಕಾರಕ್ಕೆ ಪ್ರತಿಯಾಗಿ 2024ಕ್ಕೆ ಪರ್ಯಾಯ ಸರ್ಕಾರ ಅಸ್ತಿತ್ವಕ್ಕೆ ತರಲು ಪರಿಶ್ರಮ ಹಾಕಲಾಗುತ್ತಿದೆ. ವಿರೋಧ ಪಕ್ಷದ ನಾಯಕರು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.</p>.<p>‘ಹಣದುಬ್ಬರ ಹೆಚ್ಚಾಗಿದೆ, ನಿರುದ್ಯೋಗ ಮಿತಿಮೀರುತ್ತಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಭಾರತೀಯರಿಗೆ ನೀಡಿದ್ದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಪರ್ಯಾಯ ಸರ್ಕಾರ ಅಗತ್ಯವೆನಿಸಿಕೊಂಡಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘2024ಕ್ಕೆ ಪರ್ಯಾಯ ಸರ್ಕಾರ ರಚಿಸಲು ನಿರಂತರ ಪರಿಶ್ರಮ ಹಾಕಲಾಗುತ್ತಿದೆ. ನಿತೀಶ್, ಮಮತಾ ಮತ್ತು ಕೆಸಿಆರ್ ಅದಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಅಖಿಲೇಶ್ ಹೇಳಿದರು.</p>.<p>ಉತ್ತರ ಪ್ರದೇಶದಿಂದ ಲೋಕಸಭೆಗೆ ಆಯ್ಕೆಯಾಗಿರುವ ಅವರ ಪತ್ನಿ ಡಿಂಪಲ್ ಯಾದವ್ ಸೋಮವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>‘ಉತ್ತರ ಪ್ರದೇಶದ ಜನರಿಗೆ ದ್ರೋಹವಾಗಿದೆ. ರಾಜ್ಯವು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕಿತ್ತು. ಆದರೆ ಅದು ಈಗ ಎಲ್ಲಿದೆ? ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಪ್ರಶ್ನೆ ಮಾಡಿದರು.</p>.<p>‘ಹೂಡಿಕೆದಾರರನ್ನು ಆಹ್ವಾನಿಸಬೇಕು ಎಂದು ನಿಮಗೆ ಅರ್ಥವಾಗಿದ್ದು ಐದು ವರ್ಷಗಳ ನಂತರ. ಕಳೆದ ಐದು ವರ್ಷಗಳಿಂದ ನೀವು ಏನು ಮಾಡಿದ್ದೀರಿ?’ ಎಂದು ಅವರು ಆರೋಪಿಸಿದರು.<br /><br />ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವದಲ್ಲಿವೆ. 2024ಕ್ಕೆ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರದಲ್ಲಿ ಈಗ ಇರುವ ಸರ್ಕಾರಕ್ಕೆ ಪ್ರತಿಯಾಗಿ 2024ಕ್ಕೆ ಪರ್ಯಾಯ ಸರ್ಕಾರ ಅಸ್ತಿತ್ವಕ್ಕೆ ತರಲು ಪರಿಶ್ರಮ ಹಾಕಲಾಗುತ್ತಿದೆ. ವಿರೋಧ ಪಕ್ಷದ ನಾಯಕರು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.</p>.<p>‘ಹಣದುಬ್ಬರ ಹೆಚ್ಚಾಗಿದೆ, ನಿರುದ್ಯೋಗ ಮಿತಿಮೀರುತ್ತಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಭಾರತೀಯರಿಗೆ ನೀಡಿದ್ದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಪರ್ಯಾಯ ಸರ್ಕಾರ ಅಗತ್ಯವೆನಿಸಿಕೊಂಡಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘2024ಕ್ಕೆ ಪರ್ಯಾಯ ಸರ್ಕಾರ ರಚಿಸಲು ನಿರಂತರ ಪರಿಶ್ರಮ ಹಾಕಲಾಗುತ್ತಿದೆ. ನಿತೀಶ್, ಮಮತಾ ಮತ್ತು ಕೆಸಿಆರ್ ಅದಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಅಖಿಲೇಶ್ ಹೇಳಿದರು.</p>.<p>ಉತ್ತರ ಪ್ರದೇಶದಿಂದ ಲೋಕಸಭೆಗೆ ಆಯ್ಕೆಯಾಗಿರುವ ಅವರ ಪತ್ನಿ ಡಿಂಪಲ್ ಯಾದವ್ ಸೋಮವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>‘ಉತ್ತರ ಪ್ರದೇಶದ ಜನರಿಗೆ ದ್ರೋಹವಾಗಿದೆ. ರಾಜ್ಯವು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕಿತ್ತು. ಆದರೆ ಅದು ಈಗ ಎಲ್ಲಿದೆ? ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಪ್ರಶ್ನೆ ಮಾಡಿದರು.</p>.<p>‘ಹೂಡಿಕೆದಾರರನ್ನು ಆಹ್ವಾನಿಸಬೇಕು ಎಂದು ನಿಮಗೆ ಅರ್ಥವಾಗಿದ್ದು ಐದು ವರ್ಷಗಳ ನಂತರ. ಕಳೆದ ಐದು ವರ್ಷಗಳಿಂದ ನೀವು ಏನು ಮಾಡಿದ್ದೀರಿ?’ ಎಂದು ಅವರು ಆರೋಪಿಸಿದರು.<br /><br />ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವದಲ್ಲಿವೆ. 2024ಕ್ಕೆ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>