<p><strong>ನವದೆಹಲಿ:</strong> ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಪ್ರಕಟಿಸಲಾಗಿರುವ ಮತದಾರರ ಅಂತಿಮ ಪಟ್ಟಿಯಲ್ಲಿ ಇರುವ ಕಾಗುಣಿತ ದೋಷಗಳು ಮತ್ತು ಇತರ ತಪ್ಪುಗಳನ್ನು ಪರಿಶೀಲಿಸಿ, ಸರಿಪಡಿಸಲು ಚುನಾವಣಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿತು. ಎಸ್ಐಆರ್ಗೆ ಸಂಬಂಧಿಸಿದ ಕಾನೂನು ಸಮಸ್ಯೆಗಳ ಬಗ್ಗೆ ನವೆಂಬರ್ 4ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.</p>.<p>‘ಮತದಾರರ ಅಂತಿಮ ಪಟ್ಟಿಯನ್ನು ಸೆಪ್ಟೆಂಬರ್ 30ರಂದು ಪ್ರಕಟಿಸಲಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಮತದಾರರೂ ದೂರು ನೀಡಿಲ್ಲ’ ಎಂದು ಆಯೋಗವು ಪೀಠದ ಗಮನಕ್ಕೆ ತಂದಿತು. </p>.<p>‘ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ‘ಎಷ್ಟು ಮತದಾರರ ಹೆಸರನ್ನು ಅಳಿಸಲಾಗಿದೆ ಮತ್ತು ಪರಿಷ್ಕರಣೆ ಕಾರ್ಯದಲ್ಲಿ ಅಳವಡಿಸಿಕೊಂಡ ಪಾರದರ್ಶಕತೆ ಕುರಿತು ಆಯೋಗ ಮಾಹಿತಿ ನೀಡಬೇಕು’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಪ್ರಕಟಿಸಲಾಗಿರುವ ಮತದಾರರ ಅಂತಿಮ ಪಟ್ಟಿಯಲ್ಲಿ ಇರುವ ಕಾಗುಣಿತ ದೋಷಗಳು ಮತ್ತು ಇತರ ತಪ್ಪುಗಳನ್ನು ಪರಿಶೀಲಿಸಿ, ಸರಿಪಡಿಸಲು ಚುನಾವಣಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿತು. ಎಸ್ಐಆರ್ಗೆ ಸಂಬಂಧಿಸಿದ ಕಾನೂನು ಸಮಸ್ಯೆಗಳ ಬಗ್ಗೆ ನವೆಂಬರ್ 4ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.</p>.<p>‘ಮತದಾರರ ಅಂತಿಮ ಪಟ್ಟಿಯನ್ನು ಸೆಪ್ಟೆಂಬರ್ 30ರಂದು ಪ್ರಕಟಿಸಲಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಮತದಾರರೂ ದೂರು ನೀಡಿಲ್ಲ’ ಎಂದು ಆಯೋಗವು ಪೀಠದ ಗಮನಕ್ಕೆ ತಂದಿತು. </p>.<p>‘ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ‘ಎಷ್ಟು ಮತದಾರರ ಹೆಸರನ್ನು ಅಳಿಸಲಾಗಿದೆ ಮತ್ತು ಪರಿಷ್ಕರಣೆ ಕಾರ್ಯದಲ್ಲಿ ಅಳವಡಿಸಿಕೊಂಡ ಪಾರದರ್ಶಕತೆ ಕುರಿತು ಆಯೋಗ ಮಾಹಿತಿ ನೀಡಬೇಕು’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>