ತಿರುವನಂತಪುರ: ಜಮ್ಮು ಮತ್ತು ಕಾಶ್ಮೀರವನ್ನು 'ಭಾರತದ ಅಧೀನ ಜಮ್ಮು ಮತ್ತು ಕಾಶ್ಮೀರ’ (ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ) ಎಂದೂ, ಪಾಕ್ ಆಕ್ರಮಿತ ಕಾಶ್ಮೀರವನ್ನು 'ಆಜಾದ್ ಕಾಶ್ಮೀರ' ಎಂದೂ ಫೇಸ್ಬುಕ್ನಲ್ಲಿ ಉಲ್ಲೇಖಿಸಿದ್ದ ಕೇರಳದ ಮಾಜಿ ಸಚಿವ ಮತ್ತು ಆಡಳಿತಾರೂಢ ಎಲ್ಡಿಎಫ್ ಬೆಂಬಲಿತ ಶಾಸಕ ಕೆ ಟಿ ಜಲೀಲ್ ಅವರ ಹೇಳಿಕೆ ವಿರುದ್ಧ ಕೇರಳ ರಾಜ್ಯಪಾಲ ಆರಿಫ್ ಮೊಹಮದ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.