<p><strong>ಹೈದರಾಬಾದ್</strong>: ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿರುವ ಸ್ಫೋಟಕ ವಸ್ತು ತಯಾರಿಕೆಯ ಕಾರ್ಖಾನೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. </p><p>ಪೆದ್ದ ಕಂದುಕುರ್ನಲ್ಲಿರುವ ಪ್ರೀಮಿಯರ್ ಎಕ್ಸ್ಪ್ಲೋಸಿವ್ಸ್ ಲಿಮಿಟೆಡ್ (ಪಿಇಎಲ್)ನಲ್ಲಿ ಈ ಸ್ಫೋಟ ಸಂಭವಿಸಿದೆ. ಕೈಗಾರಿಕಾ ಉದ್ದೇಶಕ್ಕೆ ಬಳಸುವ ಸ್ಫೋಟಕಗಳನ್ನು ಮತ್ತು ಡಿಟೊನೆಟರ್ಗಳನ್ನು ಪಿಇಎಲ್ನಲ್ಲಿ ತಯಾರಿಸಲಾಗುತ್ತಿತ್ತು. </p><p>ಕಾರ್ಖಾನೆಯಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸಿದ ತಕ್ಷಣ ಕಾರ್ಮಿಕರು ಹೊರಗೆ ಓಡಿಬಂದಿದ್ದಾರೆ. ಆದರೆ, ಎಂಟು ಮಂದಿಗೆ ಗಂಭೀರ ಗಾಯಗಳಾಗಿ, ಇದರಲ್ಲಿ ಬಚನಾಪೇಟೆಯ ಎಂ. ಕನಕಯ್ಯ ಎಂಬುವವರು ಮೃತಪಟ್ಟಿದ್ದಾರೆ.</p><p>‘ಕಾರ್ಖಾನೆಯ ಆವರಣದಲ್ಲಿರುವ ಕೊಠಡಿಯೊಂದರಲ್ಲಿ ಇಬ್ಬರು ಕಾರ್ಮಿಕರು ಇತರ ರಾಸಾಯನಿಕಗಳೊಂದಿಗೆ ಮೆಗ್ನೀಷಿಯಂ ಮಿಶ್ರಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ’ ಎಂದು ಭೋಂಗಿರ್ ಡಿಸಿಪಿ ಎಂ.ರಾಜೇಶ್ ಚಂದ್ರ ಹೇಳಿದ್ದಾರೆ.</p><p>‘ಸ್ಫೋಟವು ಕಾರ್ಖಾನೆಯ ಇತರ ಭಾಗಗಳಿಗೆ ಹರಡದಂತೆ ತಡೆಯಲಾಗಿದೆ. ಅಪಾಯಕಾರಿ ವಸ್ತುಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಸ್ಫೋಟಕ್ಕೆ ಕಾರಣವಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿರುವ ಸ್ಫೋಟಕ ವಸ್ತು ತಯಾರಿಕೆಯ ಕಾರ್ಖಾನೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. </p><p>ಪೆದ್ದ ಕಂದುಕುರ್ನಲ್ಲಿರುವ ಪ್ರೀಮಿಯರ್ ಎಕ್ಸ್ಪ್ಲೋಸಿವ್ಸ್ ಲಿಮಿಟೆಡ್ (ಪಿಇಎಲ್)ನಲ್ಲಿ ಈ ಸ್ಫೋಟ ಸಂಭವಿಸಿದೆ. ಕೈಗಾರಿಕಾ ಉದ್ದೇಶಕ್ಕೆ ಬಳಸುವ ಸ್ಫೋಟಕಗಳನ್ನು ಮತ್ತು ಡಿಟೊನೆಟರ್ಗಳನ್ನು ಪಿಇಎಲ್ನಲ್ಲಿ ತಯಾರಿಸಲಾಗುತ್ತಿತ್ತು. </p><p>ಕಾರ್ಖಾನೆಯಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸಿದ ತಕ್ಷಣ ಕಾರ್ಮಿಕರು ಹೊರಗೆ ಓಡಿಬಂದಿದ್ದಾರೆ. ಆದರೆ, ಎಂಟು ಮಂದಿಗೆ ಗಂಭೀರ ಗಾಯಗಳಾಗಿ, ಇದರಲ್ಲಿ ಬಚನಾಪೇಟೆಯ ಎಂ. ಕನಕಯ್ಯ ಎಂಬುವವರು ಮೃತಪಟ್ಟಿದ್ದಾರೆ.</p><p>‘ಕಾರ್ಖಾನೆಯ ಆವರಣದಲ್ಲಿರುವ ಕೊಠಡಿಯೊಂದರಲ್ಲಿ ಇಬ್ಬರು ಕಾರ್ಮಿಕರು ಇತರ ರಾಸಾಯನಿಕಗಳೊಂದಿಗೆ ಮೆಗ್ನೀಷಿಯಂ ಮಿಶ್ರಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ’ ಎಂದು ಭೋಂಗಿರ್ ಡಿಸಿಪಿ ಎಂ.ರಾಜೇಶ್ ಚಂದ್ರ ಹೇಳಿದ್ದಾರೆ.</p><p>‘ಸ್ಫೋಟವು ಕಾರ್ಖಾನೆಯ ಇತರ ಭಾಗಗಳಿಗೆ ಹರಡದಂತೆ ತಡೆಯಲಾಗಿದೆ. ಅಪಾಯಕಾರಿ ವಸ್ತುಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಸ್ಫೋಟಕ್ಕೆ ಕಾರಣವಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>