<p><strong>ಮುಂಬೈ(ಮಹಾರಾಷ್ಟ್ರ):</strong> ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಚಿವ ಧನಂಜಯ ಮುಂಡೆ ಅವರಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. </p><p>ಎನ್ಸಿಪಿಯ ಅಜಿತ್ ಪವಾರ್ ಬಣದ ನಾಯಕರಾಗಿರುವ ಧನಂಜಯ ಅವರು ಪ್ರಸ್ತುತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದಾರೆ.</p><p>ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ನನ್ನು ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಉಲ್ಲೇಖಿಸಿ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಧನಂಜಯ ಮುಂಡೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ.</p><p>ಬೀಡ್ನ ಮಸ್ಸಾಜೋಗ್ ಗ್ರಾಮದ ಸರಪಂಚ್ ಆಗಿದ್ದ ಸಂತೋಷ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.</p><p>ಪ್ರಕರಣ ಸಂಬಂಧ ಬೀಡ್ ಜಿಲ್ಲಾ ನ್ಯಾಯಾಲಯಕ್ಕೆ 1,200 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದ ಸಿಐಡಿ, ವಾಲ್ಮಿಕ್ ಕರಾಡ್ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ(ಮಹಾರಾಷ್ಟ್ರ):</strong> ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಚಿವ ಧನಂಜಯ ಮುಂಡೆ ಅವರಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. </p><p>ಎನ್ಸಿಪಿಯ ಅಜಿತ್ ಪವಾರ್ ಬಣದ ನಾಯಕರಾಗಿರುವ ಧನಂಜಯ ಅವರು ಪ್ರಸ್ತುತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದಾರೆ.</p><p>ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ನನ್ನು ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಉಲ್ಲೇಖಿಸಿ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಧನಂಜಯ ಮುಂಡೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ.</p><p>ಬೀಡ್ನ ಮಸ್ಸಾಜೋಗ್ ಗ್ರಾಮದ ಸರಪಂಚ್ ಆಗಿದ್ದ ಸಂತೋಷ್ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.</p><p>ಪ್ರಕರಣ ಸಂಬಂಧ ಬೀಡ್ ಜಿಲ್ಲಾ ನ್ಯಾಯಾಲಯಕ್ಕೆ 1,200 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದ ಸಿಐಡಿ, ವಾಲ್ಮಿಕ್ ಕರಾಡ್ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>