<p><strong>ಮುಂಬೈ:</strong> ಮಹಾರಾಷ್ಟ್ರದ ಎನ್ಸಿಪಿ ಮುಖಂಡ ಛಗನ್ ಭುಜಬಲ್ ಅವರು ಸಚಿವರಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಐದು ತಿಂಗಳ ಬಳಿಕ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಭುಜಬಲ್ ಸೇರ್ಪಡೆಯಿಂದ ಸಚಿವರ ಸಂಖ್ಯೆ 39ಕ್ಕೆ ಏರಿದೆ.</p>.<p>ಫಡಣವೀಸ್ ಸಚಿವ ಸಂಪುಟದಲ್ಲಿ ಬಿಜೆಪಿ 19 ಸಚಿವರನ್ನು ಹೊಂದಿದ್ದರೆ, ಶಿವಸೇನೆ (ಶಿಂದೆ ಬಣ) 11 ಹಾಗೂ ಎನ್ಸಿಪಿ (ಅಜಿತ್ ಬಣ) 9 ಸಚಿವರನ್ನು ಹೊಂದಿದೆ.</p>.<p>ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್, ಏಕನಾಥ ಶಿಂದೆ ಹಾಗೂ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ರಾಜಭವನದಲ್ಲಿ ಭುಜಬಲ್ಗೆ ಪ್ರಮಾಣವಚನ ಬೋಧಿಸಿದರು.</p>.<p>ಕಳೆದ ವರ್ಷದ ಡಿಸೆಂಬರ್ನಲ್ಲಿ ಫಡಣವೀಸ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಹಿಂದುಳಿದ ವರ್ಗದ ನಾಯಕರಾದ ಛಗನ್ ಭುಜಬಲ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರಲಿಲ್ಲ.</p>.<p>ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ನಲ್ಲಿ ಧನಂಜಯ ಮುಂಡೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಭುಜಬಲ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.</p>.<p>‘ಮರಾಠ ಮೀಸಲಾತಿ ವಿರೋಧಿಯನ್ನು ಸಚಿವರನ್ನಾಗಿ ಮಾಡಿರುವುದಕ್ಕೆ’ ಹೋರಾಟಗಾರ ಮನೋಜ್ ಜರಾಂಗೆ ಅವರು ಎನ್ಸಿಪಿ ವರಿಷ್ಠ ಅಜಿತ್ ಪವಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮರಾಠ ಹೋರಾಟಗಾರರನ್ನು ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಎನ್ಸಿಪಿ ಮುಖಂಡ ಛಗನ್ ಭುಜಬಲ್ ಅವರು ಸಚಿವರಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಐದು ತಿಂಗಳ ಬಳಿಕ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಭುಜಬಲ್ ಸೇರ್ಪಡೆಯಿಂದ ಸಚಿವರ ಸಂಖ್ಯೆ 39ಕ್ಕೆ ಏರಿದೆ.</p>.<p>ಫಡಣವೀಸ್ ಸಚಿವ ಸಂಪುಟದಲ್ಲಿ ಬಿಜೆಪಿ 19 ಸಚಿವರನ್ನು ಹೊಂದಿದ್ದರೆ, ಶಿವಸೇನೆ (ಶಿಂದೆ ಬಣ) 11 ಹಾಗೂ ಎನ್ಸಿಪಿ (ಅಜಿತ್ ಬಣ) 9 ಸಚಿವರನ್ನು ಹೊಂದಿದೆ.</p>.<p>ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್, ಏಕನಾಥ ಶಿಂದೆ ಹಾಗೂ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ರಾಜಭವನದಲ್ಲಿ ಭುಜಬಲ್ಗೆ ಪ್ರಮಾಣವಚನ ಬೋಧಿಸಿದರು.</p>.<p>ಕಳೆದ ವರ್ಷದ ಡಿಸೆಂಬರ್ನಲ್ಲಿ ಫಡಣವೀಸ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಹಿಂದುಳಿದ ವರ್ಗದ ನಾಯಕರಾದ ಛಗನ್ ಭುಜಬಲ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರಲಿಲ್ಲ.</p>.<p>ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ನಲ್ಲಿ ಧನಂಜಯ ಮುಂಡೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಭುಜಬಲ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.</p>.<p>‘ಮರಾಠ ಮೀಸಲಾತಿ ವಿರೋಧಿಯನ್ನು ಸಚಿವರನ್ನಾಗಿ ಮಾಡಿರುವುದಕ್ಕೆ’ ಹೋರಾಟಗಾರ ಮನೋಜ್ ಜರಾಂಗೆ ಅವರು ಎನ್ಸಿಪಿ ವರಿಷ್ಠ ಅಜಿತ್ ಪವಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮರಾಠ ಹೋರಾಟಗಾರರನ್ನು ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>