ಈ ಭೇಟಿ ಬಗ್ಗೆ ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ಆದರೆ, ಇದು ಕೇವಲ ಸೌಜನ್ಯದ ಭೇಟಿ ಎಂದು ಬಿಜೆಪಿ ಮುಖಂಡ ಫಡಣವಿಸ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದು, ಪವಾರ್ ಅವರು ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡು ಮತ್ತೆ ತಮ್ಮ ಕೆಲಸಗಳಲ್ಲಿ ತೊಡಗಿದ್ದಾರೆ. ಹೀಗಾಗಿ, ಅವರ ಆರೋಗ್ಯ ವಿಚಾರಿಸಲೆಂದು ತೆರಳಿದ್ದಾಗಿ ತಿಳಿಸಿದ್ದಾರೆ.