<p><strong>ಅಕೋಲ</strong>: ‘ತಮ್ಮ ಮೊಮ್ಮಗ ಪಾರ್ಥ್ ಪವಾರ್ ವಿರುದ್ಧದ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆ ನಡೆಸಲಿ, ಇದರಿಂದ ಸತ್ಯ ಹೊರಬರಲಿದೆ’ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. </p>.<p>‘ಇದು ಗಂಭೀರ ವಿಷಯ ಎಂದು ಮುಖ್ಯಮಂತ್ರಿ ಸಾರ್ವಜನಿಕವಾಗಿ ಹೇಳಿದ್ದಾರೆ. ಹೀಗಾಗಿ ಅವರು ತನಿಖೆಗೆ ಆದೇಶಿಸಬೇಕು. ಸತ್ಯ ಹೊರಬರಲಿ’ ಎಂದು ಪವಾರ್ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. </p>.<p>ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ ಸುಮಾರು ₹1,800 ಕೋಟಿ ಮೌಲ್ಯದ 40 ಎಕರೆ ಜಮೀನನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ, ಪಾರ್ಥ್ ಪವಾರ್ ಒಡೆತನದ ಕಂಪನಿ ಕೇವಲ ₹300 ಕೋಟಿಗೆ, ಮುದ್ರಾಂಕ ಶುಲ್ಕವನ್ನೂ ಪಾವತಿಸದೆ ಅಕ್ರಮವಾಗಿ ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.<p>‘ಪಾರ್ಥ್ ತಪ್ಪು ಮಾಡುತ್ತಾನೆ ಎಂದು ನನಗೆ ಅನಿಸುತ್ತಿಲ್ಲ’ ಎಂಬ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪವಾರ್, ‘ಇದು ಅವರ ಅಭಿಪ್ರಾಯ’ ಎಂದರು.</p>.<p><strong>ಸಚಿವ ಪ್ರತಾಪ್ ಸರ್ನಾಯಕ್ ವಿರುದ್ಧವೂ ತನಿಖೆಯಾಗಲಿ: ವಡೆತ್ತಿವಾರ್</strong></p><p>ಮಹಾರಾಷ್ಟ್ರದ ಸಚಿವ ಪ್ರತಾಪ್ ಸರ್ನಾಯಕ್ ಅವರು, ಮೀರಾ–ಭಯಂದರ್ನಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಲು ₹200 ಕೋಟಿ ಮೊತ್ತದ 4 ಎಕರೆ ಜಮೀನನ್ನು ಕೇವಲ ₹3 ಕೋಟಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ವಡೆತ್ತಿವಾರ್ ಆರೋಪಿಸಿದ್ದಾರೆ. </p><p>ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದ ಬೆನ್ನಲ್ಲೇ, ವಿಜಯ್ ಈ ಆರೋಪ ಮಾಡಿದ್ದಾರೆ.</p>.<p> <strong>₹21 ಕೋಟಿ ಮುದ್ರಾಂಕ ಶುಲ್ಕ ವಂಚನೆ</strong></p><p>ಅಮೇಡಿಯಾ ಎಂಟರ್ಪ್ರೈಸಸ್ ಎಂಬ ಕಂಪನಿಯ ಮಾಲೀಕರಾದ ಪಾರ್ಥ್ ಪವಾರ್ ಮತ್ತು ಅವರ ಸಹೋದರ ದಿಗ್ವಿಜಯ್ ಪಾಟೀಲ್ ಅವರು ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ 40 ಎಕರೆ ಜಮೀನು ಖರೀದಿಸಲು ಶೀತಲ್ ತೇಜವಾನಿ ಎಂಬುವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.</p><p> ಸುಮಾರು 272 ಭೂ ಮಾಲೀಕರ ‘ಪವರ್ ಆಫ್ ಅಟಾರ್ನಿ’ಯನ್ನು ಶೀತಲ್ ತೇಜವಾನಿ ಹೊಂದಿದ್ದರು. ಇವರ ಬಳಿಯಿಂದ 40 ಎಕರೆಯನ್ನು ₹300 ಕೋಟಿಗೆ ಖರೀದಿಸಿದ್ದರು. ₹300 ಕೋಟಿಗೆ ಶೇ 7ರಷ್ಟು ಮುದ್ರಾಂಕ ಶುಲ್ಕವಾಗಿ ₹21 ಕೋಟಿ ಪಾವತಿಸಬೇಕು. ಇದನ್ನು ಪಾವತಿಸಿರಲಿಲ್ಲ. ತನಿಖೆಯ ನಂತರ ಈ ಖರೀದಿ ಒಪ್ಪಂದ ರದ್ದುಗೊಂಡರೆ ದುಪ್ಪಟ್ಟು ಮುದ್ರಾಂಕ ಶುಲ್ಕ ಅಂದರೆ ₹42 ಕೋಟಿ ಪಾವತಿಸಬೇಕಾಗುತ್ತದೆ.</p>.<div><blockquote>ಭೂಕಬಳಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು </blockquote><span class="attribution">– ದೇವೇಂದ್ರ ಫಡಣವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಕೋಲ</strong>: ‘ತಮ್ಮ ಮೊಮ್ಮಗ ಪಾರ್ಥ್ ಪವಾರ್ ವಿರುದ್ಧದ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆ ನಡೆಸಲಿ, ಇದರಿಂದ ಸತ್ಯ ಹೊರಬರಲಿದೆ’ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. </p>.<p>‘ಇದು ಗಂಭೀರ ವಿಷಯ ಎಂದು ಮುಖ್ಯಮಂತ್ರಿ ಸಾರ್ವಜನಿಕವಾಗಿ ಹೇಳಿದ್ದಾರೆ. ಹೀಗಾಗಿ ಅವರು ತನಿಖೆಗೆ ಆದೇಶಿಸಬೇಕು. ಸತ್ಯ ಹೊರಬರಲಿ’ ಎಂದು ಪವಾರ್ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. </p>.<p>ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ ಸುಮಾರು ₹1,800 ಕೋಟಿ ಮೌಲ್ಯದ 40 ಎಕರೆ ಜಮೀನನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ, ಪಾರ್ಥ್ ಪವಾರ್ ಒಡೆತನದ ಕಂಪನಿ ಕೇವಲ ₹300 ಕೋಟಿಗೆ, ಮುದ್ರಾಂಕ ಶುಲ್ಕವನ್ನೂ ಪಾವತಿಸದೆ ಅಕ್ರಮವಾಗಿ ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.<p>‘ಪಾರ್ಥ್ ತಪ್ಪು ಮಾಡುತ್ತಾನೆ ಎಂದು ನನಗೆ ಅನಿಸುತ್ತಿಲ್ಲ’ ಎಂಬ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪವಾರ್, ‘ಇದು ಅವರ ಅಭಿಪ್ರಾಯ’ ಎಂದರು.</p>.<p><strong>ಸಚಿವ ಪ್ರತಾಪ್ ಸರ್ನಾಯಕ್ ವಿರುದ್ಧವೂ ತನಿಖೆಯಾಗಲಿ: ವಡೆತ್ತಿವಾರ್</strong></p><p>ಮಹಾರಾಷ್ಟ್ರದ ಸಚಿವ ಪ್ರತಾಪ್ ಸರ್ನಾಯಕ್ ಅವರು, ಮೀರಾ–ಭಯಂದರ್ನಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಲು ₹200 ಕೋಟಿ ಮೊತ್ತದ 4 ಎಕರೆ ಜಮೀನನ್ನು ಕೇವಲ ₹3 ಕೋಟಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ವಡೆತ್ತಿವಾರ್ ಆರೋಪಿಸಿದ್ದಾರೆ. </p><p>ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದ ಬೆನ್ನಲ್ಲೇ, ವಿಜಯ್ ಈ ಆರೋಪ ಮಾಡಿದ್ದಾರೆ.</p>.<p> <strong>₹21 ಕೋಟಿ ಮುದ್ರಾಂಕ ಶುಲ್ಕ ವಂಚನೆ</strong></p><p>ಅಮೇಡಿಯಾ ಎಂಟರ್ಪ್ರೈಸಸ್ ಎಂಬ ಕಂಪನಿಯ ಮಾಲೀಕರಾದ ಪಾರ್ಥ್ ಪವಾರ್ ಮತ್ತು ಅವರ ಸಹೋದರ ದಿಗ್ವಿಜಯ್ ಪಾಟೀಲ್ ಅವರು ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ 40 ಎಕರೆ ಜಮೀನು ಖರೀದಿಸಲು ಶೀತಲ್ ತೇಜವಾನಿ ಎಂಬುವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.</p><p> ಸುಮಾರು 272 ಭೂ ಮಾಲೀಕರ ‘ಪವರ್ ಆಫ್ ಅಟಾರ್ನಿ’ಯನ್ನು ಶೀತಲ್ ತೇಜವಾನಿ ಹೊಂದಿದ್ದರು. ಇವರ ಬಳಿಯಿಂದ 40 ಎಕರೆಯನ್ನು ₹300 ಕೋಟಿಗೆ ಖರೀದಿಸಿದ್ದರು. ₹300 ಕೋಟಿಗೆ ಶೇ 7ರಷ್ಟು ಮುದ್ರಾಂಕ ಶುಲ್ಕವಾಗಿ ₹21 ಕೋಟಿ ಪಾವತಿಸಬೇಕು. ಇದನ್ನು ಪಾವತಿಸಿರಲಿಲ್ಲ. ತನಿಖೆಯ ನಂತರ ಈ ಖರೀದಿ ಒಪ್ಪಂದ ರದ್ದುಗೊಂಡರೆ ದುಪ್ಪಟ್ಟು ಮುದ್ರಾಂಕ ಶುಲ್ಕ ಅಂದರೆ ₹42 ಕೋಟಿ ಪಾವತಿಸಬೇಕಾಗುತ್ತದೆ.</p>.<div><blockquote>ಭೂಕಬಳಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು </blockquote><span class="attribution">– ದೇವೇಂದ್ರ ಫಡಣವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>